Advertisement

ಯಾರೂ ಬಿ.ಆರ್.ಪಾಟೀಲ್ ಅವರ ಕ್ಷಮೆ ಕೇಳಿಲ್ಲ: ಸಚಿವ ಕೆ.ಜೆ.ಜಾರ್ಜ್

05:06 PM Jul 30, 2023 | Team Udayavani |

ಚಿಕ್ಕಮಗಳೂರು: ಯಾರೂ ಬಿ.ಆರ್.ಪಾಟೀಲ್ ಅವರ ಕ್ಷಮೆ ಕೇಳಿಲ್ಲ,ಅವರ ವಿಚಾರದಲ್ಲಿ ಎಲ್ಲರೂ ಒಳ್ಳೆಯದ್ದನ್ನೇ ಮಾತನಾಡಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಶುಕ್ರವಾರ ಹೇಳಿಕೆ ನೀಡಿದ್ದಾರೆ.

Advertisement

ಉಮನ್ ಚಾಂಡಿಯವರು ನಿಧನ ಹೊಂದಿದ ಕಾರಣದಿಂದ, ರಾಹುಲ್ ಗಾಂಧಿ ಅವರು ಬರಲು ಆಗದ ಕಾರಣ ಸಭೆ ಮುಂದೆ ಹೋಗಿದೆ. ಕೆಲ ಸಚಿವರಿಗೆ ಬೇಜಾರು ಆಗುತ್ತೆ, ಅಭಿವೃದ್ಧಿ ಕಾರ್ಯವನ್ನ ತಾತ್ಕಲಿಕವಾಗಿ ತಡೆಹಿಡಿದಿದ್ದೇವೆ. ಅದನ್ನ ಮತ್ತೆ ಪ್ರಾರಂಭ ಮಾಡಲು ಆದೇಶ ಕೊಡಲು ಮುಂದಾಗಿದ್ದಾರೆ. ಬಜೆಟ್‍ನಲ್ಲಿನ ಎಲ್ಲಾ ಅಭಿವೃದ್ಧಿ ಆಗುತ್ತದೆ, ಹೊಸ ಕಾರ್ಯಕ್ರಮಕಷ್ಟೆ ನಿರ್ಬಂಧ ಹಾಕಲಾಗಿದೆ ಎಂದರು.

ಗೃಹಜ್ಯೋತಿ ಜುಲೈನಿಂದಲೇ ಪ್ರಾರಂಭವಾಗಿ ಆಗಿದೆ. ಜುಲೈ ತಿಂಗಳ ಬಿಲ್ ಆಗಸ್ಟ್ ನಲ್ಲಿ ಬರಲಿದೆ. ಆಗ ಎಲ್ಲರಿಗೂ ಫ್ರೀ ಸಿಗಲಿದೆ ಎಂದರು.

ರಾಜ್ಯದಲ್ಲಿ ಮತ್ತೆ ಕಸ್ತೂರಿ ರಂಗನ್ ವರಿದಿ ಗುಮ್ಮ ಹಿನ್ನೆಲೆಯಲ್ಲಿ, ಯಾವ ಮಂತ್ರಿ ಮಂಡಲದಲ್ಲೂ ಸೆನ್ಸಿಟೀವ್ ಝೋನ್ ಬಗ್ಗೆ ತೀರ್ಮಾನ ಆಗಿರಲಿಲ್ಲ. ಸೆನ್ಸಿಟೀವ್ ಝೋನ್ ಮಾಡಲು ಕ್ಯಾಬಿನೆಟ್ ಉಪಸಮಿತಿಗೆ ರಚನೆಗೆ ಅಧಿಕಾರ ಕೊಟ್ಟಿದ್ದೇವೆ. ಸಬ್ ಕಮಿಟಿಯಲ್ಲಿ ಚರ್ಚೆಯಾಗಿ ಕ್ಯಾಬಿನೆಟ್ ನಲ್ಲಿ ತೀರ್ಮಾನವಾಗಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next