Advertisement

ರೈಲ್ವೆಯನ್ನು ಖಾಸಗೀಕರಣಗೊಳಿಸುವ ಯೋಚನೆ ಕೇಂದ್ರ ಸರ್ಕಾರದ ಬಳಿ ಇಲ್ಲ:

07:59 PM Apr 09, 2022 | Team Udayavani |

ನವದೆಹಲಿ: ಭಾರತೀಯ ರೈಲ್ವೆ ಇಲಾಖೆಯನ್ನು ಖಾಸಗೀಕರಣ ಮಾಡುವ ಯಾವುದೇ ಯೋಚನೆ ಕೇಂದ್ರ ಸರ್ಕಾರದ ಬಳಿ ಇಲ್ಲ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿ‌ನ್‌ ವೈಷ್ಣವ್‌ ಹೇಳಿದ್ದಾರೆ.

Advertisement

ಭಾರತೀಯ ರೈಲ್ವೆ ಮಜೂದಾರ್‌ ಸಂಘದ 20ನೇ ಅಖಿಲ ಭಾರತೀಯ ಸಮ್ಮೇಳನಕ್ಕೆ ಶನಿವಾರ ವರ್ಚುವಲ್‌ ಆಗಿ ಚಾಲನೆ ನೀಡಿದ ಅವರು ಈ ಮಾತನ್ನು ಹೇಳಿದ್ದಾರೆ.

ಇದನ್ನೂ ಓದಿ:ಕುಂಬಳೆ :ಮನೆಗೆ ನುಗ್ಗಿ ಹಲ್ಲೆಗೈದು ಇಬ್ಬರು ಮಕ್ಕಳ ಅಪಹರಣ: ಪತಿ ವಿರುದ್ಧ ದೂರು ನೀಡಿದ ಪತ್ನಿ

“ವಿರೋಧ ಪಕ್ಷಗಳು ಸುಮ್ಮನೆ ರೈಲ್ವೆ ಖಾಸಗೀಕರಣದ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿವೆ. ನಮ್ಮಲ್ಲಿ ಅಂತಹ ಯೋಜನೆಯಿಲ್ಲ. ಬದಲಾಗಿ ನಾವು ರೈಲ್ವೆ ಪ್ರಯಾಣಿಕರ ಹಿತದೃಷ್ಟಿಯಿಂದಾಗಿ ಇಲಾಖೆಯನ್ನು ಇನ್ನಷ್ಟು ಆಧುನೀಕರಣಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ’ ಎಂದು ಅವರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next