Advertisement

ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧ ಅಸಮಧಾನ-ಪೊಲೀಸ್‌ ಠಾಣೆ ಹೊರಗೆ ಬೆಂಕಿಹಚ್ಚಿಕೊಂಡ ವ್ಯಕ್ತಿ!

03:17 PM Mar 05, 2024 | Team Udayavani |

ಲಕ್ನೋ: ತನ್ನ ಪಿಕ್‌ ಅಪ್‌ ವ್ಯಾನ್‌ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಅಸಮಧಾನಗೊಂಡ ವ್ಯಕ್ತಿಯೊಬ್ಬ ಪೊಲೀಸ್‌ ಠಾಣೆಯ ಹೊರಭಾಗದಲ್ಲಿ ತನಗೆ ತಾನೇ ಬೆಂಕಿ ಹಚ್ಚಿಕೊಂಡಿರುವ ಘಟನೆ ಉತ್ತರಪ್ರದೇಶದ ಶಹಜಹಾನ್‌ ಪುರ್‌ ನಲ್ಲಿ ನಡೆದಿದೆ.

Advertisement

ಇದನ್ನೂ ಓದಿ:Shimoga; ರಾಜ್ಯದ ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ: ಭವಿಷ್ಯ ನುಡಿದ ಪ್ರಣವಾನಂದ ಸ್ವಾಮೀಜಿ

ಈತ ಪೊಲೀಸ್‌ ಠಾಣೆ ಹೊರಭಾಗದಲ್ಲಿ ಮೈಮೇಲೆ ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ. ಕೂಡಲೇ ಠಾಣೆಯಲ್ಲಿದ್ದ ಪೊಲೀಸರು ಹೊರಗೆ ಬಂದು ರಕ್ಷಿಸಿರುವುದಾಗಿ ವರದಿ ತಿಳಿಸಿದೆ.

ಆರು ತಿಂಗಳ ಹಿಂದೆಯೇ ತನ್ನ ಪತಿಯ ವಾಹನವನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ಪೊಲೀಸರಿಗೆ ದೂರನ್ನು ಕೂಡಾ ನೀಡಿದ್ದರು ಎಂದು ಪತ್ನಿ ತಿಳಿಸಿದ್ದಾಳೆ. ವಾಹನ ಕಳ್ಳತನ ಪ್ರಕರಣದಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಂಡಿರಲಿಲ್ಲವಾಗಿತ್ತು ಎಂದು ಆರೋಪಿಸಿದ್ದಾರೆ. ವ್ಯಕ್ತಿ ಬೆಂಕಿ ಹಚ್ಚಿಕೊಂಡ ದೃಶ್ಯವನ್ನು ಸಮೀಪದಲ್ಲಿ ಇದ್ದ ಜನರು ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದರು.

ಸುಮಾರು 10-12 ಪೊಲೀಸ್‌ ಸಿಬಂದಿಗಳು ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿರುವುದು ವೈರಲ್‌ ವಿಡಿಯೋದಲ್ಲಿ ಸೆರೆಯಾಗಿದೆ. ಬೆಂಕಿ ಹಚ್ಚಿಕೊಂಡ ವ್ಯಕ್ತಿಯನ್ನು ತಾಹೀರ್‌ ಅಲಿ ಎಂದು ಗುರುತಿಸಲಾಗಿದೆ. ಅಲಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ವರದಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next