Advertisement

Hassan ಮೈತ್ರಿ ಅಭ್ಯರ್ಥಿ ವಿಷಯದಲ್ಲಿ ಯಾವುದೇ ಸಮಸ್ಯೆ ಇಲ್ಲ: ಅಗರ್ವಾಲ್‌

08:54 PM Apr 07, 2024 | Team Udayavani |

ಮೈಸೂರು: ಹಾಸನ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ವಿಷಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್‌ ದಾಸ್‌ ಅಗರ್ವಾಲ್‌ ಸ್ಪಷ್ಟಪಡಿಸಿದರು.

Advertisement

ರವಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಹಾಸನಕ್ಕೆ ಹೋಗಿದ್ದೆ , ಅಲ್ಲಿ ಯಾವುದೇ ಸಮಸ್ಯೆ ಕಾಣಲಿಲ್ಲ. ಎಲ್ಲರೂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಜೆಡಿಎಸ್‌ನವರಿಗಿಂತಲೂ ಬಿಜೆಪಿ ಕಾರ್ಯಕರ್ತರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಪ್ರೀತಂ ಗೌಡ ಬೆಂಬಲಿಗರೂ ಕೆಲಸ ಮಾಡುತ್ತಿದ್ದಾರೆ. ಆವಶ್ಯಕತೆ ಬಿದ್ದರೆ ಅವರು ಹಾಸನಕ್ಕೆ ಹೋಗುತ್ತಾರೆ ಎನ್ನುವ ಮೂಲಕ ಬಂಡಾಯಕ್ಕೆ ತೇಪೆ ಹಾಕುವ ಕೆಲಸ ಮಾಡಿದರು.

ಪ್ರೀತಂ ಗೌಡ ಹಾಸನದಲ್ಲಿ ಸೋತಿರಬಹುದು. ಆದರೆ, ಜೆಡಿಎಸ್‌ ಶಾಸಕರಿಗಿಂತಲೂ ಜನಪ್ರಿಯ ವ್ಯಕ್ತಿ. ಅವರಿಗೆ ಹಾಸನ ಒಗ್ಗೂಡಿಸಲು ಒಂದು ದಿನ ಸಾಕು. ಈಗಾಗಲೇ ಆ ಕೆಲಸವನ್ನು ಮಾಡುತ್ತಿದ್ದಾರೆ. ಪ್ರಜ್ವಲ್‌ ರೇವಣ್ಣ, ಪ್ರೀತಂ ಗೌಡ ನಡುವೆ ಉತ್ತಮ ಸಂಬಂಧವಿದೆ. ಇಬ್ಬರ ಭೇಟಿಗೆ ನನ್ನ ಮಧ್ಯಸ್ಥಿಕೆ ಅಗತ್ಯ ಏನಿದೆ ಎಂದು ಪ್ರಶ್ನಿಸಿದ ಅವರು, ಜನ ಏನಾದರೂ ಮಾತನಾಡಿಕೊಳ್ಳಲಿ. ಇಬ್ಬರ ನಡುವೆ ಯಾವುದೇ ಗೊಂದಲ ಇಲ್ಲ ಎಂದು ಒತ್ತಿ ಹೇಳಿದರು.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next