Advertisement

ತೋಟದ ಮನೆಗಳ ವಿದ್ಯುತ್ ಕಡಿತ ಮಾಡುವ ಪ್ರಸ್ತಾಪವಿಲ್ಲ: ಸಚಿವ ಸುನಿಲ್ ಸ್ಪಷ್ಟನೆ

04:27 PM Sep 15, 2022 | Team Udayavani |

ವಿಧಾನಸಭೆ :ತೋಟದ ಮನೆಗಳಿಗೆ ವಿದ್ಯುತ್ ಕಡಿತ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದೆ ಇಲ್ಲ. ಐಪಿ ಸೆಟ್ ಗಳಿಗಾಗಿ ಪ್ರಾಯೋಗಿಕವಾಗಿ ಸಿಂಗಲ್ ಫೇಸ್ ಟ್ರಾನ್ಸ್ ಫಾರ್ಮರ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಇಂಧನ ಸಚಿವ ವಿ ಸುನಿಲ್ ಕುಮಾರ್ ವಿಧಾನಸಭೆಗೆ ತಿಳಿಸಿದ್ದಾರೆ.

Advertisement

ಪ್ರಶ್ನೋತ್ತರ ಕಲಾಪ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕ ಶಿವಾನಂದ್ ಮಹಾಂತೇಶ್ ಕೌಜಲಗಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಯಾರು ವಿದ್ಯುತ್ ಸಂಪರ್ಕ ಪಡೆದಿದ್ದಾರೋ ಅವರಿಗೆ ಯಾವುದೇ ಕಾರಣಕ್ಕೂ ಸಂಪರ್ಕ ಕಡಿತ ಮಾಡುವುದಿಲ್ಲ. ಸಂಪರ್ಕ ಇಲ್ಲದವರಿಗಾಗಿ ಪ್ರತ್ಯೇಕ ಕ್ರಿಯಾಯೋಜನೆ ರೂಪಿಸಲಾಗುತ್ತಿದೆ. ಹೀಗಾಗಿ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಪಿಎಸ್ ಐ ನೇಮಕಾತಿ ಹಗರಣ: ವಿಧಾನಸಭೆಯಲ್ಲಿ ಚರ್ಚೆಗೆ ಸ್ಪೀಕರ್ ಅವಕಾಶ

ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ಕಾರಣಕ್ಕೂ ಅಡ್ಡಿಯಾಗುವುದಕ್ಕೆ ನಾವು ಬಿಡುವುದಿಲ್ಲ. ಕೆಇಆರ್ ಸಿ ಹಾಗೂ ನಮ್ಮ ದರಕ್ಕೆ ಸ್ವಲ್ಪ ವ್ಯತ್ಯಾಸ ಇದೆ. ಅದನ್ನು ಸರಿಪಡಿಸುತ್ತೇವೆ. ಐಪಿ ಸೆಟ್ ಗೆ ನಿರಂತರ ಏಳು ಗಂಟೆ ವಿದ್ಯುತ್ ಪೂರೈಕೆ ಹಂತಹಂತವಾಗಿ ನಡೆಯುತ್ತಿದೆ ಎಂದು ವಿವರಿಸಿದರು.

ಸಿಎಂ ಜತೆ ಚರ್ಚೆ
ರಾಜ್ಯದಲ್ಲಿ 3854 ಗ್ರಾಮ ವಿದ್ಯುತ್ ಪ್ರತಿನಿಧಿಗಳು ಇದ್ದಾರೆ. ಅವರನ್ನು ಖಾಯಂಗೊಳಿಸುವ ವಿಚಾರ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಜತೆ ಚರ್ಚೆ ಮಾಡಲಾಗುವುದು. ಅವರ ಬೇಡಿಕೆಗಳನ್ನು ಹದಿನೇಳು ವರ್ಷದ ಬಳಿಕ ಪೂರ್ಣ ಮಾಡಲಾಗಿದೆ ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next