Advertisement

ಫ್ರೀಡಂ ಪಾರ್ಕ್ ಹೊರತುಪಡಿಸಿ ಬೆಂಗಳೂರಿನಲ್ಲೆಲ್ಲೂ ಪ್ರತಿಭಟನೆ-ರಾಲಿ ನಡೆಸುವಂತಿಲ್ಲ:ಹೈಕೋರ್ಟ್

04:46 PM Mar 03, 2022 | Team Udayavani |

ಬೆಂಗಳೂರು: ನಗರದ ಫ್ರೀಡಂ ಪಾರ್ಕ್ ಹೊರತುಪಡಿಸಿ ರಾಜಧಾನಿ ಬೆಂಗಳೂರಿನ ಯಾವುದೇ ಭಾಗದಲ್ಲಿಯೂ ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳ ಪ್ರತಿಭಟನೆ, ಮೆರವಣಿಗೆ, ರಾಲಿ ನಡೆಸಬಾರದು ಎಂದು ಹೈಕೋರ್ಟ್ ಆದೇಶಿಸಿದೆ.

Advertisement

ರಾಜಕೀಯ ಪಕ್ಷಗಳು ಅಥವಾ ಸಂಘಟನೆಗಳು ಪ್ರತಿಬಾರಿ ಪಾದಯಾತ್ರೆ-ಪ್ರತಿಭಟನೆ ಕೈಗೊಂಡಾಗಲೂ ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಸಿಲುಕುತ್ತಿರುವ ಹಿನ್ನೆಲೆಯಲ್ಲಿ ನಿಗದಿತ ಸ್ಥಳ (ಫ್ರೀಡಂ ಪಾರ್ಕ್) ಹೊರತುಪಡಿಸಿ, ನಗರದ ಬೇರೆ ಯಾವ ಕಡೆಯೂ ರಾಜಕೀಯ ಪಕ್ಷಗಳು, ಸಂಘ-ಸಂಸ್ಥೆಗಳಿಗೆ ಪ್ರತಿಭಟನೆ, ಮೆರವಣಿಗೆ ನಡೆಸುವುದನ್ನು ನಿರ್ಬಂಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಇದನ್ನೂ ಓದಿ:ರಿಸ್ಕ್ ತೆಗೆದುಕೊಳ್ಳದೇ ಹೋಗಿದ್ದರೆ ಖಂಡಿತವಾಗಿಯೂ ಬರಲು ಆಗುತ್ತಿರಲಿಲ್ಲ

ಅಲ್ಲದೇ, ಈ ಆದೇಶವನ್ನು ಆದಷ್ಟು ಬೇಗ ಜಾರಿಗೆ ತರುವಂತೆಯೂ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಇದೇ ವೇಳೆ ಕಾಂಗ್ರೆಸ್ ಪಾದಯಾತ್ರೆಯಿಂದ ಸಂಚಾರ ದಟ್ಟಣೆ ಉಂಟಾಗಿದ್ದಕ್ಕೆ ಹೈಕೋರ್ಟ್ ಇದೇ ವೇಳೆ ಅಸಮಾಧಾನ ವ್ಯಕ್ತಪಡಿಸಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next