Advertisement

ಜೂನ್ 30ರವರೆಗೆ ಸಾರ್ವಜನಿಕವಾಗಿ ಗುಂಪುಗೂಡುವಂತಿಲ್ಲ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

08:18 AM Apr 26, 2020 | Nagendra Trasi |

ಲಕ್ನೋ:ರಾಜ್ಯದಲ್ಲಿ ಕೋವಿಡ್ 19 ವೈರಸ್ ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 30ರವರೆಗೆ ಸಾರ್ವಜನಿಕವಾಗಿ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ ತಿಳಿಸಿದ್ದಾರೆ.

Advertisement

ರಾಜಕೀಯ ಸಭೆ, ಸಮಾರಂಭ ಮತ್ತು ಸಾಮಾಜಿಕ ಚಟುವಟಿಕೆಯ ಸಮಾರಂಭಗಳು ದೊಡ್ಡ ಮಟ್ಟದ ಜನಸಂದಣಿಗೆ ಅವಕಾಶ ಮಾಡಿಕೊಡಲಿದೆ. ಹೀಗಾಗಿ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಅನಿವಾರ್ಯವಾಗಲಿದೆ ಎಂದು ಸಿಎಂ ವಿವರಿಸಿದ್ದಾರೆ.

ರಾಜ್ಯದಲ್ಲಿ ಜೂನ್ 30ರವರೆಗೆ ಯಾವುದೇ ರೀತಿಯ ಜನಸಂದಣಿ ಸೇರದಂತೆ ನೋಡಿಕೊಳ್ಳಬೇಕು ಎಂದು ಸಿಎಂ ಯೋಗಿ ಅಧಿಕಾರಿಗಳಿಗೆ ಖಡಕ್ ಸೂಚನೆ ರವಾನಿಸಿದ್ದಾರೆ. ಕೋವಿಡ್ 19 ವೈರಸ್ ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಮಾಧ್ಯಮ ಸಲಹೆಗಾರ ಮೃತ್ಯುಂಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಕೋವಿಡ್ 19 ವೈರಸ್ ಪ್ರಮಾಣ ಹೆಚ್ಚಳವಾಗುತ್ತಿರುವ ನಿಟ್ಟಿನಲ್ಲಿ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ 11 ಸಮಿತಿಗಳ ಜತೆ ಚರ್ಚೆ ನಡೆಸಿದ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next