Advertisement

BJP or Congress ಸೇರುವ ಪ್ರಶ್ನೆಯೇ ಇಲ್ಲ: ಜನಾರ್ದನ ರೆಡ್ಡಿ ಸ್ಪಷ್ಟ ನುಡಿ

05:59 PM Feb 17, 2024 | Team Udayavani |

ಕೊಪ್ಪಳ : ಬಿಜೆಪಿಯಾಗಲಿ ಕಾಂಗ್ರೆಸ್ ಪಕ್ಷವನ್ನಾಗಲಿ ಸೇರುವ ಪ್ರಶ್ನೆಯೇ ಇಲ್ಲ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಶನಿವಾರ ಹೇಳಿಕೆ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಜನ ಮೋದಿ ಮತ್ತೆ ಪ್ರಧಾನಿಯಾಗುವ ಆಸಕ್ತಿ ಹೊಂದಿದ್ದಾರೆ. ಈ ಕಾರಣಕ್ಕೆ ಕೆಆರ್ ಪಿಪಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಿದೆ ಹೊರತು ಯಾವುದೇ ಕಾರಣಕ್ಕೆ ನಾನು ಬಿಜೆಪಿ ಸೇರುವುದಿಲ್ಲ ಎಂದರು.

ಮಾಧ್ಯಮಗಳಲ್ಲಿ ಬಿಜೆಪಿ ಸೇರುತ್ತಾರೆ ಎಂಬ ವರದಿಗಳು ಬರುತ್ತಿವೆ, ಆದರೆ ನಾನು ಸೇರುವುದಿಲ್ಲ ಎಂದರು.

ವಿಧಾನಸಭೆಯಲ್ಲಿಡಿಸಿಎಂ ಡಿ.ಕೆ. ಶಿವಕುಮಾರರೊಂದಿಗೆ ಆತ್ಮೀಯವಾಗಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ”ಕಳೆದ 25 ವರ್ಷದಿಂದ ಡಿ.ಕೆ. ಶಿವಕುಮಾರ್ ನಾನು ಆತ್ಮೀಯರು. ಅವರು ನನ್ನನ್ನು ರಾಜಕೀಯವಾಗಿ ಆಹ್ವಾನ ಮಾಡಿಲ್ಲ. ನಾನು ಕಾಂಗ್ರೆಸ್ ಪಕ್ಷ ಸೇರುವುದಿಲ್ಲ” ಎಂದರು.

Advertisement

Udayavani is now on Telegram. Click here to join our channel and stay updated with the latest news.

Next