Advertisement

ಮತ್ತೆ ಕಾಂಗ್ರೆಸ್‌ ಸೇರುವ ಪ್ರಶ್ನೆಯೇ ಇಲ್ಲ: ಸಚಿವ ನಾರಾಯಣ ಗೌಡ

10:01 PM Dec 12, 2022 | Team Udayavani |

ಮೈಸೂರು: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ಶಾಸಕರು ಮತ್ತೆ ನಮ್ಮ ಪಕ್ಷಕ್ಕೆ ಬರಲಿದ್ದಾರೆ ಎಂಬ ಕಾಂಗ್ರೆಸ್‌ ನಾಯಕರ ಹೇಳಿಕೆಗಳನ್ನು ಕ್ರೀಡಾ ಸಚಿವ ಕೆ.ಸಿ. ನಾರಾಯಣ ಗೌಡ ಅಲ್ಲಗಳೆದಿದ್ದಾರೆ.

Advertisement

ನಾವು 17 ಮಂದಿ ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ. ಬಿಜೆಪಿ ನಮ್ಮನ್ನು ಪಕ್ಷ ಚೆನ್ನಾಗಿ ನಡೆಸಿಕೊಂಡಿದೆ.

ಸಚಿವ ಸ್ಥಾನ ಕೊಟ್ಟು ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟಿದೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಮರಳುವುದಿಲ್ಲ ಎಂದು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next