Advertisement

Vijayapura; ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ: ಸಂಸದ ರಮೇಶ ಜಿಗಜಿಣಗಿ

04:25 PM Sep 04, 2023 | keerthan |

ವಿಜಯಪುರ: ಕಳೆದ ನಾಲ್ಕೂವರೆ ದಶಕದಿಂದ ಕಾಂಗ್ರೆಸ್ ವಿರೋಧಿ ರಾಜಕಾರಣ ಮಾಡುತ್ತ ಬಂದಿರುವ ನಾನು, ಈ ಹಂತದಲ್ಲಿ ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ ಎಂದು ವಿಜಯಪುರ ಬಿಜೆಪಿ ಹಿರಿಯ ಸಂಸದ ರಮೇಶ ಜಿಗಜಿಣಗಿ ಸ್ಪಷ್ಟಪಡಿಸಿದರು.

Advertisement

ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತೇನೆ ಎಂಬುದು ಊಹಾಪೋಹ ಮಾತ್ರ. ಕಾಂಗ್ರೆಸ್ ವಿರೋಧಿಸುತ್ತಲೇ ರಾಜಕೀಯವಾಗಿ ಬೆಳೆದಿರುವ ನಾನು ಈ ಹಂತದಲ್ಲಿ ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಒಂದೊಮ್ಮೆ ಬಿಜೆಪಿ ಟಿಕೆಟ್ ನೀಡದಿದ್ದರೆ ಮನೆಯಲ್ಲಿ ಇರುತ್ತೇನೆಯೇ ಹೊರತು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ ಎಂದು ಸಮಜಾಯಿಷಿ ನೀಡಿದರು.

ಇದನ್ನೂ ಓದಿ:G20 Summit: ಭಾರತದಲ್ಲಿ ನಡೆಯುವ ಜಿ20ಗೆ ಚೀನಾ ಅಧ್ಯಕ್ಷ ಕ್ಸಿ ಗೈರು, ಪ್ರಧಾನಿ ಭಾಗಿ: ವರದಿ

ನನಗೆ ಟಿಕೆಟ್ ತಪ್ಪಿಸಿ ಹೊಸ, ಯುವ ಮುಖಗಳಿಗೆ ಟಿಕೆಟ್ ನೀಡುವಂತೆ ಬಿಜೆಪಿ ಪಕ್ಷದ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿರುವ ವಿಷಯದ ಬಗ್ಗೆ ನನಗೆ ಗೊತ್ತಿಲ್ಲ. ಸಾಮಾಜಿಕ ಜಾಲತಾಣದಲ್ಲಿ ನಕಾರಾತ್ಮಕ ವಿಷಯಗಳ ಕುರಿಯು ಬರುವ ಯಾವುದೇ ವಿಷಯಗಳನ್ನು ನಾನು ನೋಡಲು ಹೋಗುವುದಿಲ್ಲ. ಹೀಗಾಗಿ ಇಂಥ ಸಂಗತಿಗಳ ಬಗ್ಗೆ ನನಗೇನೂ ತಿಳಿಯದು ಎಂದರು.

ಬಿಜೆಪಿ ಲಿಂಗಾಯತ ನಾಯಕರನ್ನು ಕಡೆಗಣಿಸುತ್ತಿದೆ ಎಂದು ಮೇಲ್ಮನೆ ಶಾಸಕ ಪ್ರದೀಪ ಶಟ್ಟರ ಹೇಳಿಕೆ ನೀಡಿರುವ ಕುರಿತು ನನಗೇನೂ ಗೊತ್ತಿಲ್ಲ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next