Advertisement

ಪಶ್ಚಿಮ ಬಂಗಾಳದಲ್ಲಿ ಎನ್ ಆರ್ ಸಿ ಜಾರಿಗೆ ತರುವ ಪ್ರಶ್ನೆಯೇ ಇಲ್ಲ: ಮಮತಾ ಬ್ಯಾನರ್ಜಿ

09:21 AM Oct 24, 2019 | Team Udayavani |

ಸಿಲಿಗುರಿ: ಪಶ್ಚಿಮಬಂಗಾಳದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ಜಾರಿಗೆ ತರಲು ಅನುಮತಿ ನೀಡುವುದಿಲ್ಲ, ಮಾತ್ರವಲ್ಲದೆ ಯಾವುದೇ  ನಿರಾಶ್ರಿತರ ಕೇಂದ್ರಗಳನ್ನು ಸ್ಥಾಪನೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪುನರುಚ್ಚಿಸಿದ್ದಾರೆ.

Advertisement

ಆಡಳಿತಾತ್ಮಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಶ್ಚಿಮ ಬಂಗಾಳ ಸರ್ಕಾರದ ಪರವಾಗಿ ಎನ್ ಆರ್ ಸಿ ಯನ್ನು ಪರಿಚಯಿಸುವ ಯೋಜನೆಯಿಲ್ಲ ಎಂದು ತಿಳಿಸಿದ್ದಾರೆ.

ಪ್ರಸ್ತುತ ಅಸ್ಸಾಂ ನಲ್ಲಿ ಬಿಜೆಪಿ ಸರ್ಕಾರವಿದ್ದು, ಅದ್ದರಿಂದ ಎನ್ ಆರ್ ಸಿಯನ್ನು ಕಾರ್ಯಗತಗೊಳಿಸಲು  ಸಾಧ್ಯವಾಯಿತು. ಆದರೇ ಪಶ್ಚಿಮ ಬಂಗಾಳ  ರಾಜ್ಯದಲ್ಲಿ ಸರ್ಕಾರ ಕೂಡ ನಮ್ಮದೆ ಇರುವುದರಿಂದ ಎನ್ ಆರ್ ಸಿ ಜಾರಿಗೊಳಿಸುವುದನ್ನು ವಿರೋಧಿಸುತ್ತಿದ್ದೇವೆ. ಅದರ ಜೊತೆಗೆ ನಾವು ಯಾವುದೇ ನಿರಾಶ್ರಿತರ ಕೇಂದ್ರಗಳನ್ನು ಸ್ಥಾಪನೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

ಅಸ್ಸಾನಂತೆಯೇ ದೇಶಾದ್ಯಂತ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿ ಶತಃಸಿದ್ಧ ಎಂದು ಈ ಹಿಂದೆ  ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದರು. ಕರ್ನಾಟಕ, ಮಹಾರಾಷ್ಟ್ರ ಸಹಿತ ಕೆಲವು ಕಡೆಗಳಲ್ಲಿ ನಿರಾ ಶ್ರಿತರ ಕೇಂದ್ರ ಸ್ಥಾಪನೆ ಮಾಡುವುದಾಗಿ ಅದಕ್ಕಾಗಿ ಸಿದ್ದತೆ ನಡೆಯುತ್ತಿದೆ ಎಂಬ ಮಾಹಿತಿಯನ್ನು ಕೂಡ ಇದೇ ಸಂದರ್ಭದಲ್ಲಿ ತಿಳಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next