Advertisement

Bengaluru- Kannuru; ಕಲ್ಲಿಕೋಟೆಗೆ ರೈಲು ವಿಸ್ತರಣೆ ಬೇಡ: ದಿನೇಶ್‌

10:46 PM Feb 05, 2024 | Team Udayavani |

ಬೆಂಗಳೂರು: ಬೆಂಗಳೂರು- ಕಣ್ಣೂರು ರೈಲನ್ನು ಕೋಯಿಕ್ಕೋಡ್‌ಗೆ ವಿಸ್ತರಿಸಲು ಮುಂದಾಗಿರುವುದರಿಂದ ಕರಾವಳಿ ಭಾಗದ ಜನರಿಗೆ ತೀವ್ರ ತೊಂದರೆ ಆಗಲಿದ್ದು, ಈ ಹಿನ್ನೆಲೆಯಲ್ಲಿ ರೈಲ್ವೆ ಸಚಿವಾಲಯ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ದ. ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಗ್ರಹಿಸಿದ್ದಾರೆ.

Advertisement

ಈ ಸಂಬಂಧ ರೈಲ್ವೆ ಸಚಿವ ಅಶ್ವಿ‌ನಿ ವೈಷ್ಣವ್‌ ಅವರಿಗೆ ಪತ್ರ ಬರೆದಿರುವ ಗುಂಡೂರಾವ್‌, ಬೆಂಗಳೂರು- ಕಣ್ಣೂರು ರೈಲು (ಸಂಖ್ಯೆ 16511 ಮತ್ತು 16512) ಬೆಂಗಳೂರಿನಿಂದ ಮಂಗಳೂರು ಮಾರ್ಗವಾಗಿ ಕಣ್ಣೂರು ನಡುವೆ ಇರುವ ಏಕೈಕ ರೈಲು ಸೇವೆಯಾಗಿದೆ. ಅದನ್ನು ವಿಸ್ತರಿಸುವುದರಿಂದ ಸೀಟುಗಳಿಗೆ ಇನ್ನಷ್ಟು ಬೇಡಿಕೆ ಹೆಚ್ಚಾಗಲಿದ್ದು, ಇದರಿಂದ ಮಂಗಳೂರು ಸಹಿತ ಕರಾವಳಿ ಭಾಗದ ಜನರಿಗೆ ಸಮಸ್ಯೆ ಉಂಟಾಗಲಿದೆ. ಸೀಟುಗಳ ಸಂಖ್ಯೆ ಹೆಚ್ಚಿಸದೆ, ವಿಸ್ತರಿಸಿರುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next