Advertisement

ನಿವೃತ್ತಿ ವಯೋಮಿತಿ ಹೆಚ್ಚಳ ಆದೇಶ ಹಿಂಪಡೆದ ಕೇರಳ ಸರ್ಕಾರ

08:12 PM Nov 02, 2022 | Team Udayavani |

ತಿರುವನಂತಪುರ: ರಾಜ್ಯ ಸರ್ಕಾರಿ ಉದ್ದಿಮೆಗಳಲ್ಲಿ ಕೆಲಸ ಮಾಡುವವರ ನಿವೃತ್ತಿ ವಯೋಮಿತಿಯನ್ನು 60 ವರ್ಷಕ್ಕೆ ಹೆಚ್ಚಿಸಿದ್ದ ಆದೇಶವನ್ನು ಕೇರಳ ಸರ್ಕಾರ ವಾಪಸ್‌ ಪಡೆದಿದೆ.

Advertisement

ಕಳೆದ ವಾರವಷ್ಟೇ ಸಿಎಂ ಪಿಣರಾಯಿ ವಿಜಯನ್‌ ನೇತೃತ್ವದ ಎಲ್‌ಡಿಎಫ್ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶದ ಔಚಿತ್ಯವನ್ನು ಕಾಂಗ್ರೆಸ್‌ ನೇತೃತ್ವದ ಯುಡಿಎಫ್, ಬಿಜೆಪಿ ಆಕ್ಷೇಪ ಮಾಡಿದ್ದವು.

ಈ ಹಿನ್ನೆಲೆಯಲ್ಲಿ ಬುಧವಾರ ಮತ್ತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ನೇತೃತ್ವದಲ್ಲಿ ಸಂಪುಟ ಸಭೆ ನಡೆದು, ವಯೋಮಿತಿ ಹೆಚ್ಚಳ ಆದೇಶವನ್ನು ವಾಪಸ್‌ ಪಡೆದುಕೊಳ್ಳಲು ನಿರ್ಧರಿಸಲಾಗಿದೆ.

ನಿವೃತ್ತಿ ವಯೋಮಿತಿ ಏರಿಕೆ ರಾಜ್ಯದ ಉದ್ಯೋಗಾಕಾಂಕ್ಷಿ ಯುವಕರಿಗೆ ಮಾಡಿದ ಮೋಸ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next