Advertisement

ಕೋವಿಡ್-19 ಕ್ಷಿಪ್ರವಾಗಿ ಹರಡುತ್ತಿದೆ; ಲಾಕ್ ಡೌನ್ ಸಡಿಲಿಕೆ ಮಾಡಲ್ಲ: ಅರವಿಂದ್ ಕೇಜ್ರಿವಾಲ್

09:26 AM Apr 20, 2020 | Nagendra Trasi |

ನವದೆಹಲಿ: ರಾಷ್ಟ್ರರಾಜಧಾನಿ ದಿಲ್ಲಿಯಲ್ಲಿ ಕೋವಿಡ್ 19 ವೈರಸ್ ಪರಿಸ್ಥಿತಿ ಕ್ಷಿಪ್ರವಾಗಿ ಹರಡುವ ಮೂಲಕ ಗಂಭೀರವಾಗಿದೆ. ಹೀಗಾಗಿ ಲಾಕ್ ಡೌನ್ ಸಡಿಲಿಕೆಗೆ ಅವಕಾಶ ಇಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

Advertisement

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಧಾನಿ ಅತೀ ಹೆಚ್ಚು ಕೋವಿಡ್ 19 ಪ್ರಕರಣಕ್ಕೆ ಸಾಕ್ಷಿಯಾಗಿದೆ. ಅಷ್ಟೇ ಅಲ್ಲ ನಿಯಂತ್ರಿತ ಪ್ರದೇಶಗಳ ಸಂಖ್ಯೆಯೂ ಹೆಚ್ಚಾಗಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಲಾಕ್ ಡೌನ್ ನಿರ್ಬಂಧವನ್ನು ಸಡಿಲಿಸಬಾರದು ಎಂದು ನಿರ್ಧರಿಸಲಾಗಿದೆ ಎಂದು ವಿವರಿಸಿದರು.

ಪ್ರಸ್ತುತ ದೆಹಲ್ಲಿಯಲ್ಲಿ ಕೋವಿಡ್ 19 ವೈರಸ್ ನ 77 ನಿಯಂತ್ರಿತ ವಲಯಗಳನ್ನು ಗುರುತಿಸಲಾಗಿದೆ. ಅಲ್ಲದೇ ಎಲ್ಲಾ ಜಿಲ್ಲೆಗಳನ್ನು ಹಾಟ್ ಸ್ಪಾಟ್ ಎಂದು ವಿಭಾಗಿಸಲಾಗಿದೆ ಎಂದು ತಿಳಿಸಿದರು.

ಏಪ್ರಿಲ್ 27ರಂದು ನಡೆಯಲಿರುವ ಪುನರ್ ಪರಿಶೀಲನಾ ಸಭೆಯಲ್ಲಿ ಮುಂದಿನ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಜ್ರಿವಾಲ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next