Advertisement

Money Laundering Case: ಆಪ್‌ನ ಸತ್ಯೇಂದ್ರ ಜೈನ್‌ಗೆ ಜಾಮೀನಿಲ್ಲ

08:29 PM Apr 06, 2023 | Team Udayavani |
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಮಾಜಿ ಸಚಿವ, ಆಪ್‌ ನಾಯಕ ಸತ್ಯೇಂದ್ರ ಜೈನ್‌ ಅವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್‌ ನಿರಾಕರಿಸಿದೆ.

ಸತ್ಯೇಂದ್ರ ಜೈನ್‌ ಪ್ರಭಾವಿ ವ್ಯಕ್ತಿಯಾಗಿದ್ದು, ಸಾಕ್ಷ್ಯಗಳನ್ನು ತಿರುಚುವ ಸಾಧ್ಯತೆ ಇದೆ. ಹೀಗಾಗಿ ಅವರ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ ಎಂದು ದೆಹಲಿ ಹೈಕೋರ್ಟ್‌ ಹೇಳಿದೆ. ಅಲ್ಲದೇ ಕಳೆದ ವರ್ಷ ಜೈನ್‌ ಅವರಿಗೆ ಜಾಮೀನು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಯಾವುದೇ ಅಕ್ರಮ ಇರಲಿಲ್ಲ ಎಂದು ಇದೇ ವೇಳೆ ಹೈಕೋರ್ಟ್‌ ಪ್ರತಿಪಾದಿಸಿದೆ. ಸತ್ಯೇಂದ್ರ ಜೈನ್‌ ಅವರ ಒಡೆತನದ ನಾಲ್ಕು ಕಂಪನಿಗಳಿಂದ ಅಕ್ರಮ ಹಣಕಾಸು ವರ್ಗಾವಣೆ ಆರೋಪ ಸಂಬಂಧ ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳು ಕಳೆದ ವರ್ಷ ಮೇ 30ರಂದು ಅವರನ್ನು ಬಂಧಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next