Advertisement

ಕೊಪ್ಪಳದಲ್ಲಿ ಬಂದ್ ನೀರಸ: ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

10:06 AM Dec 05, 2020 | keerthan |

ಕೊಪ್ಪಳ: ಮರಾಠಾ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್ ಕರೆಗೆ ಕೊಪ್ಪಳ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

Advertisement

ಕೆಲ ಕನ್ನಡಪರ ಸಂ‌ಘಟನೆಗಳು ಬೆಳಗ್ಗೆ ಪ್ರತಿಭಟನೆ ನಡೆಸಿ ಬಸ್‌ ಸಂಚಾರ ತಡೆದು ಸರ್ಕಾರದ ವಿರುದ್ದ ದಿಕ್ಕಾರ ಕೂಗಿದವು. ಜಿಲ್ಲೆಯಲ್ಲಿ ಅಂಗಡಿ ಮುಂಗಟ್ಟು ಕ್ರಮೇಣ ವಹಿವಾಟು ಆರಂಭಿಸುತ್ತಿವೆ.

ಸಾರಿಗೆ ಸಂಚಾರ, ಖಾಸಗಿ ವಾಹನಗಳ ಓಡಾಟ, ತರಕಾರಿ ಮಾರುಕಟ್ಟೆ ವಹಿವಾಟು ನಡೆದಿವೆ.‌ ಸಂಘಟನೆಯ ಮುಖಂಡರು ಕೇವಲ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ:ಗದಗಿನಲ್ಲಿ ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್

Advertisement

ಜಿಲ್ಲೆಯಲ್ಲಿ ಬಂದ್ ಗೆ ದೊಡ್ಡ ಮಟ್ಟದ ಬೆಂಬಲ ವ್ಯಕ್ತವಾಗಿಲ್ಲ ಸಂಘಟನೆಗಳ ಮುಖಂಡರು ಮಾತ್ರ ಸಾರಿಗೆ ಸಂಚಾರ ತಡೆದು ರಸ್ತೆಯಲ್ಲಿ ಮಲಗಿ ಪ್ರತಿಕೃತಿ ದಹಿಸಿ ಸರ್ಕಾರದ ವಿರುದ್ಧ ಗುಡುಗಿದರು.

Advertisement

Udayavani is now on Telegram. Click here to join our channel and stay updated with the latest news.

Next