Advertisement

ವಿಲೀನಕ್ಕೆ ತಡೆಯಿಲ್ಲ: ಸುಪ್ರೀಂ

05:47 AM Mar 29, 2019 | mahesh |

ಹೊಸದಿಲ್ಲಿ: ವಿಜಯ ಬ್ಯಾಂಕ್‌, ದೇನಾ ಬ್ಯಾಂಕ್‌ಗಳನ್ನು ಬ್ಯಾಂಕ್‌ ಆಫ್ ಬರೋಡಾದೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ವಿವಿಧ ಬ್ಯಾಂಕ್‌ ಅಧಿಕಾರಿಗಳ ಸಂಘಟನೆಗಳು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್‌ ಗುರುವಾರ ತಿರಸ್ಕರಿಸಿದೆ. ಇದರಿಂದಾಗಿ, ಎಪ್ರಿಲ್‌ 1ರಿಂದ ಈ ಬ್ಯಾಂಕ್‌ಗಳ ವಿಲೀನ ಜಾರಿಗೆ ಇದ್ದ ಅಡೆತಡೆ ನಿವಾರಣೆಯಾಗಿದೆ. ವಿಲೀನದ ಅನಂತರ ಬ್ಯಾಂಕ್‌ ಆಫ್ ಬರೋಡಾ, ಭಾರತೀಯ ಸ್ಟೇಟ್‌ ಬ್ಯಾಂಕ್‌ ಅನಂತರದ ದೇಶದ 2ನೇ ಅತಿ ದೊಡ್ಡ ಬ್ಯಾಂಕಿಂಗ್‌ ಜಾಲವೆಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next