Advertisement

ಎಪಿಎಲ್‌ ಕಾರ್ಡ್‌ದಾರರಿಗಿಲ್ಲ ಅಕ್ಕಿ!

12:54 AM Oct 22, 2022 | Team Udayavani |

ಉಡುಪಿ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ಕಳೆದ ಎರಡು ತಿಂಗಳಿಂದ ಬಡತನ ರೇಖೆಗಿಂತ ಮೇಲಿರುವ (ಎಪಿಎಲ್‌ )ಕಾರ್ಡ್‌ದಾರರಿಗೆ ಪಡಿತರ ಸಿಗುತ್ತಿಲ್ಲ.

Advertisement

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ ಇಲಾಖೆಯ ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್‌) ಎಪಿಎಲ್‌ ಹಾಗೂ ಅಂತ್ಯೋದಯ ಕಾರ್ಡ್‌ ದಾರರಿಗೆ ಉಚಿತವಾಗಿ ಪಡಿತರ ವಿತರಿಸುವಂತೆ ಎಪಿಎಲ್‌ ಕಾರ್ಡ್‌ದಾರರಿಗೂ ನಿರ್ದಿಷ್ಟ ದರದಲ್ಲಿ ನಿರ್ದಿಷ್ಟ ಪ್ರಮಾಣದ ಅಕ್ಕಿಯನ್ನು ಪ್ರತೀ ತಿಂಗಳು ವಿತರಣೆ ಮಾಡಲಾಗುತ್ತದೆ.ಆದರೆ ಸೆಪ್ಟಂಬರ್‌ನಿಂದ ಉಭಯ ಜಿಲ್ಲೆಯಲ್ಲಿ ಬಿಪಿಎಲ್‌ ಕಾರ್ಡ್‌ದಾರರಿಗೆ ಸರಿಯಾಗಿ ಅಕ್ಕಿ ಪೂರೈಕೆಯಾಗುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ.

ಉಡುಪಿ ತಾಲೂಕಿನ ಬಹುತೇಕ ನ್ಯಾಯಬೆಲೆ ಅಂಗಡಿ ಯಲ್ಲಿ ಈ ಸಮಸ್ಯೆಯಿದೆ. ಎಪಿಎಲ್‌ ಕಾರ್ಡ್‌ದಾರರು ಪಡಿತರಕ್ಕಾಗಿ ಸರತಿ ಸಾಲಿನಲ್ಲಿ ನಿಂತರೂ ಪಡಿತರ ಪಡೆದು ಕೊಳ್ಳಲು ಸಾಧ್ಯವಾಗುತ್ತಿಲ್ಲ. ಬೈಂದೂರು ಮತ್ತು ಕುಂದಾಪುರ ತಾಲೂಕಿನಲ್ಲಿ ಸ್ವಲ್ಪ ಪ್ರಮಾಣದ ದಾಸ್ತಾನಿದ್ದು, ಸಮಸ್ಯೆ ಎಷ್ಟೊಂದು ತೀವ್ರವಾಗಿಲ್ಲ. ದ.ಕ. ಜಿಲ್ಲೆಯ ಬಹುತೇಕ ಎಲ್ಲ ತಾಲೂಕುಗಳಲ್ಲೂ ಎಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿಯ ಕೊರತೆಯಿದೆ ಎಂದು ಹೇಳಾಗುತ್ತಿದೆ.
ಎಪಿಎಲ್‌ ಕಾರ್ಡ್‌ ಹೊಂದಿದ ಎಲ್ಲರಿಗೂ ಅಕ್ಕಿ ನೀಡಲಾಗುವುದಿಲ್ಲ. ಯಾರು ತಮಗೆ ಅಕ್ಕಿ ಬೇಕು ಎಂದು ಮುಂಚಿತವಾಗಿ ತಿಳಿಸಿರುತ್ತಾರೋ ಅಂಥವರಿಗೆ ಮಾತ್ರ ವಿತರಣೆ ಮಾಡಲಾಗುತ್ತದೆ. ಸಮಸ್ಯೆಯನ್ನು ಮೇಲಧಿಕಾರಿ ಗಳ ಗಮನಕ್ಕೂ ತಂದಿದ್ದೇವೆ.ಶೀಘ್ರ ಪರಿಹಾರ ಸಿಗಲಿದೆ ಎಂದು ಫ‌ುಡ್‌ ಇನ್‌ಸ್ಪೆಕ್ಟರ್‌ಗಳು ಮಾಹಿತಿ ನೀಡಿದರು.

ಶೀಘ್ರ ಪೂರೈಕೆ: ಎಪಿಎಲ್‌ ಕಾರ್ಡ್‌ದಾರರಿಗೆ ಪಡಿತರ ವ್ಯವಸ್ಥೆಯಡಿ ಅಕ್ಕಿ ವಿತರಣೆ ಬೇಕಾದಷ್ಟು ಅಕ್ಕಿಯ ದಾಸ್ತಾನು ಇಲ್ಲದೇ ಕೊರತೆ ಆಗಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ರಾಜ್ಯ ಮಟ್ಟದ ಅಧಿಕಾರಿಗಳ ಗಮನಕ್ಕೂ ತರಲಾಗಿದೆ. ಶೀಘ್ರವೇ ಪೂರೈಕೆಯಾಗುವ ಸಾಧ್ಯತೆಯಿದೆ. ಫ‌ುಡ್‌ ಕಾರ್ಪೊರೇಶನ್‌ ಆಫ್ ಇಂಡಿಯಾದಿಂದ ಬಂದ ತತ್‌ಕ್ಷಣ ದಿಂದಲೇ ಪೂರೈಕೆ ಪ್ರಕ್ರಿಯೆ ಪುನರ್‌ ಆರಂಭಿಸಲಾಗುವುದು ಎಂದು ಇಲಾಖೆಯ ದ.ಕ. ಜಿಲ್ಲೆಯ ಉಪನಿರ್ದೇಶಕರಾದ ಎನ್‌. ಮಾಣಿಕ್ಯ, ಉಡುಪಿ ಜಿಲ್ಲೆಯ ಉಪನಿರ್ದೇಶಕರಾದ ಮೊಹಮ್ಮದ್‌ ಇಸಾಕ್‌ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next