Advertisement

ಸುರಕ್ಷತೆ ಇಲದ್ಲ ರಾಷ್ಟ್ರೀಯ ಹೆದ್ದಾರಿ 75ರ ತಂಗುದಾಣ

04:18 PM Sep 03, 2021 | Team Udayavani |

ಮುಳಬಾಗಿಲು: ನಗರದ ಅಂಚಿನಿಂದ ಕರ್ನಾಟಕ ಗಡಿ ಭಾಗದವರೆಗೆ ರಾಷ್ಟ್ರೀಯ ಹೆದ್ದಾರಿ 75ರ ವಿವಿಧ ಹಳ್ಳಿಗಳ ಗೇಟ್‌ನಲ್ಲಿ ನಿರ್ಮಿಸಿರುವ ಬಸ್‌ ಶೆಲ್ಟರ್‌ ಗಳು ಜನರ ಉಪಯೋಗಕ್ಕೆ ಬಾರದಂತಾಗಿದೆ.

Advertisement

ಹೆದ್ದಾರಿ ಸಂಪರ್ಕ: ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಹಾಗೂ ಭಾರತ ಸರ್ಕಾರದ ಆದೇಶದ ಅನುಸಾರ ಜೆಎಸ್‌ಆರ್‌ ಟೋಲ್‌ವೇಸ್‌ ಪ್ರೈವೇಟ್ ಕಂಪನಿ 2015ರಲ್ಲಿ ಮುಳಬಾಗಿಲು ನಗರದ ಅಂಚಿನಿಂದ ಕರ್ನಾಟಕ ಗಡಿ ಭಾಗದವರೆಗೆ ಸುಮಾರು 15 ಕಿ.ಮೀ.
ರಾಷ್ಟ್ರೀಯ ಹೆದ್ದಾರಿ 75ರ ಚತುಷ್ಪಥ ರಸ್ತೆಯನ್ನು ನೂರಾರು ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿದ್ದಾರೆ. ಇದರಿಂದ ತಾಲೂಕಿನ ಜನತೆ ಆಂಧ್ರದ ಚೆನ್ನೈ, ತಿರುಪತಿ ಮತ್ತು ಬೆಂಗಳೂರು ಸೇರಿ ಯಾವುದೇ ಮೂಲೆಗೆ ಹೋಗಬೇಕಾದರೂ ಇದೇ ಹೆದ್ದಾರಿ ಸಂಪರ್ಕ ಕಲ್ಪಿಸಲಿದೆ.

2015ರಲ್ಲಿ ನಿರ್ಮಾಣ: ತಾಲೂಕಿನ ಅಭಿವೃದ್ಧಿ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ. ಅಂತೆಯೇ ಎನ್‌. ಯಲುವಹಳ್ಳಿ ಬಳಿ ಟೋಲ್‌ ಪ್ಲಾಜಾ ನಿರ್ಮಿಸಲಾಗಿದೆ. ಸದರಿ ಟೋಲ್‌ ಅನ್ನು 2015 ರ ಜೂ.13 ರಂದು ಅಂದಿನ ಮುಳಬಾಗಿಲು ಶಾಸಕ ಜಿ. ಮಂಜುನಾಥ್‌ ಮತ್ತು ಶ್ರೀನಿವಾಸಪುರ ಶಾಸಕರಾದ ಕೆ.ಆರ್‌.ರಮೇಶ್‌ಕುಮಾರ್‌, ಜೆಎಸ್‌ಆರ್‌ ಕಂಪನಿ ಛೇರ್ಮನ್‌ ಜೆ.ಶ್ರೀನಿವಾಸರೆಡ್ಡಿ, ವ್ಯವಸ್ಥಾಪಕ ನಿರ್ದೇಶಕ ಭಕ್ತವತ್ಸಲರೆಡ್ಡಿ ಚಾಲನೆ ನೀಡಿದ್ದರು. ಈ ವೇಳೆ,ಕಾರು, ಜೀಪ್‌ ಹಾದು ಹೋಗಲು 20- 25 ರೂ.,ಟೆಂಪೋ 30-45 ರೂ., ಬಸ್‌ 60-90 ರೂ., 3 ಆ್ಯಕ್ಸಲ್‌ ವಾಹನಕ್ಕೆ 65-100 ರೂ., 4 ಆ್ಯಕ್ಸಲ್‌ 95-140 ರೂ.,7 ಆ್ಯಕ್ಸಲ್‌ ವಾಹನಕ್ಕೆ115 ರೂ. ಶುಲ್ಕ ವಸೂಲಿ ಮಾಡಲಾಗುತ್ತಿದೆ. ಆದರೆ, ಈ ಮಾರ್ಗದಲ್ಲಿ ಹಲವಾರು ಗ್ರಾಮಗಳಿದ್ದು ಪ್ರಯಾಣಿಕರು ಹಳ್ಳಿಗಳಿಂದ ಹೊರ ಊರುಗಳಿಗೆ ತೆರಳಲು ಬಸ್‌ ಗೇಟ್‌ಗೆ ಬಂದಾಗ ಪ್ರಯಾಣಿಕರು ಕುಳಿತುಕೊಂಡು ದಣಿವಾರಿಸಿಕೊಳ್ಳಲು ಮತ್ತು ಬಿಸಿಲು, ಮಳೆ, ಗಾಳಿಯಿಂದ ಪಾರಾಗಲು ಅಸಾಧ್ಯವಾಗಿದೆ.

ಇದನ್ನೂ ಓದಿ:ವಾಹನ ಟೋಯಿಂಗ್ ಮಾಡುವಾಗ ನಿಯಮಾವಳಿ ಪಾಲಿಸಿ: ಪೊಲೀಸರಿಗೆ ಗೃಹ ಸಚಿವರ ತಾಕೀತು

ಡೀಸಿ ಕ್ರಮ ಕೈಗೊಳ್ಳಲಿ: ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸಿರುವಹೆದ್ದಾರಿಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಯಾವುದೇ ಸೌಲಭ್ಯಗಳಿಲ್ಲದೇ ಇರು ವುದರಿಂದ ಪ್ರತಿಯೊಂದು ಗೇಟ್‌ನ ಎರಡೂ ಕಡೆ ಸುರಕ್ಷತೆಯುಳ್ಳ ತಂಗುದಾಣ ನಿರ್ಮಿಸಬೇಕು. ಸರ್ಕಾರ ಜನರ ತೆರಿಗೆ ಹಣದಿಂದ ಜನರಿಗಾಗಿ ನಿರ್ಮಿಸಿರುವ ರಸ್ತೆಯಲ್ಲಿ ಜನರಿಂದ ಶುಲ್ಕ ವಸೂಲಿ ಮಾಡಿದರೂ ಸುರಕ್ಷತಾ ಕ್ರಮಕೈಗೊಂಡಿಲ್ಲ. ಈ ಕುರಿತು ಜಿಲ್ಲಾಧಿಕಾರಿಗಳು ಇತ್ತ ಕಡೆ ಗಮನಹರಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Advertisement

ಬಿಸಿಲು-ಮಳೆಗೆ ತಂಗುದಾಣ ಆಶ್ರಯಿಸಿದರೂ ಪ್ರಯೋಜನವಿಲ್ಲ
ಈಗಾಗಲೇ ಸೊನ್ನವಾಡಿ ಬೈಪಾಸ್‌ ಸಮೀಪ, ನರಸಿಂಹತೀರ್ಥ, ಸೀಗೇನಹಳ್ಳಿ, ಅಲ್ಲಾಲಸಂದ್ರ ಗೇಟ್‌, ಕಪ್ಪಲಮಡಗು, ಶ್ರೀರಂಗಪುರ, ವೆಂಕಟಾಪುರ, ಎನ್‌.ವಡ್ಡಹಳ್ಳಿ, ಪದ್ಮಘಟ್ಟ, ತಾತಿಕಲ್‌, ಹಳೆಕುಪ್ಪ, ನಂಗಲಿ,ಮುದಿಗೆರೆ, ಗಡೂxರು ಗೇಟ್‌ಗಳಲ್ಲಿ ಬಸ್‌ ಶೆಲ್ಟರ್‌ ನಿರ್ಮಿಸಲಾಗಿದೆ.ಆದರೆ, ಬಸ್‌ ನಿಲುಗಡೆ ಒಂದುಕಡೆಯಾದರೆ, ಶೆಲ್ಟರ್‌ ನಿರ್ಮಿಸಿರುವುದು ಮತ್ತೂಂದುಕಡೆ. ಇದರಿಂದಾಗಿ ಸದರಿ ಶೆಲ್ಟರ್‌ಗಳು ಜನರ ಉಪಯೋಗಕ್ಕೆ ಬಾರದಂತಾಗಿದೆ. ಅಲ್ಲದೇ ಈ ಬಸ್‌ ಗೇಟ್‌ಗಳಲ್ಲಿ ಪ್ರಯಾಣಿಕರು ಬಿಸಿಲು, ಮಳೆ, ಗಾಳಿಯಿಂದ ಪಾರಾಗಲು ತಂಗುದಾಣಗಳನ್ನು ಆಶ್ರಯಿಸಿದರೂ ಸುರಕ್ಷತೆ ಇಲ್ಲದೇ ಪ್ರಯಾಣಿಕರು ಪರದಾಡುವಂತಹ ಸನ್ನಿವೇಶ ಎದುರಾಗಿದೆ.

ರಾ. ಹೆ.75ರಲ್ಲಿ ನಿರ್ಮಿ ಸಿರುವ ತಂಗುದಾಣಗಳಿಂದ ಜನರಿಗೆ ಆಗುತ್ತಿರುವ ಅನಾನುಕೂಲದ ಬಗ್ಗೆ ಜಿಲ್ಲಾಧಿ ಕಾರಿಗಳ ಗಮನಕ್ಕೆ ತರಲಾಗುವುದು. ನಂತರಕ್ರಮ ಕೈಗೊಳ್ಳಲಾಗುವುದು.
– ರಾಜಶೇಖರ್‌, ತಹಶೀಲ್ದಾರ್‌

ರಾ.ಹೆ.75ರ ಮುಳಬಾಗಿಲಿನಿಂದ ಕರ್ನಾಟಕ ಗಡಿವರೆಗೂ ಜೆಎಸ್‌ಆರ್‌ ಕಂಪನಿ ಆಯಾ ಗೇಟ್‌ಗಳಲ್ಲಿ ಸುರಕ್ಷತೆಯುಳ್ಳ ಬಸ್‌ ಶೆಲ್ಟರ್‌ ನಿರ್ಮಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳುಕ್ರಮಕೈಗೊಳ್ಳಬೇಕು.
-ಕಸವಿರೆಡ್ಡಿಹಳ್ಳಿ ರಾಜು, ಮುಖಂಡ

-ಎಂ.ನಾಗರಾಜಯ್ಯ

Advertisement

Udayavani is now on Telegram. Click here to join our channel and stay updated with the latest news.

Next