Advertisement

“ಚುನಾವಣೆ ಘೋಷಣೆಗೆ ಮುನ್ನ ಶೋಧ, ಜಪ್ತಿ ಅಧಿಕಾರವಿಲ್ಲ’

10:48 PM Apr 11, 2023 | Team Udayavani |

ಬೆಂಗಳೂರು: ಚುನಾವಣೆ ದಿನಾಂಕ ಘೋಷಣೆಗೆ ಮುನ್ನ ಚುನಾವಣ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ದಾಳಿ ನಡೆಸಿ ಯಾವುದೇ ವಸ್ತುಗಳನ್ನು ಜಪ್ತಿ ಪಡಿಸಿಕೊಳ್ಳುವಂತಿಲ್ಲ, ವಶಕ್ಕೆ ಪಡೆದುಕೊಳ್ಳಲು ಅವಕಾಶವಿಲ್ಲ ಎಂದು ಹೈಕೋರ್ಟ್‌ ಹೇಳಿದೆ.

Advertisement

ಚುನಾವಣೆ ದಿನಾಂಕ ಘೋಷಣೆಗೂ ಮೊದಲು ತಮಗೆ ಸೇರಿದ 530 ಅಕ್ಕಿ ಮೂಟೆಗಳನ್ನು ವಶಪಡಿಸಿಕೊಂಡ ಚುನಾವಣ ಅಧಿಕಾರಿಗಳು ಮತ್ತು ಪೊಲೀಸರ ಕ್ರಮ ಪ್ರಶ್ನಿಸಿ ಬೆಂಗಳೂರಿನ ಶಿವಾಜಿನಗರದ ನಿವಾಸಿ ಅಹ್ಮದ್‌ ಎಂಬವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ರೀತಿ ಹೇಳಿದೆ.

ಅಲ್ಲದೆ ಚುನಾವಣಾಧಿಕಾರಿಗಳು ಮತ್ತು ಪೊಲೀಸರು ವಶಪಡಿಸಿಕೊಂಡು 530 ಅಕ್ಕಿ ಮೂಟೆಗಳು ತಮ್ಮ ಸುಪರ್ದಿಗೆ ಬಂದ ಮೇಲೆ ಈಗಾಗಲೇ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಅದನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಬಾರದು ಎಂದು ಅರ್ಜಿದಾರರಿಗೆ ಷರತ್ತು ವಿಧಿಸಿರುವ ಹೈಕೋರ್ಟ್‌, ಆ ಷರತ್ತು ಪಾಲಿಸುವ ಬಗ್ಗೆ ಅರ್ಜಿದಾರರಿಂದ ಮುಚ್ಚಳಿಕೆಯನ್ನೂ ಬರೆಸಿಕೊಂಡಿದೆ.

 

Advertisement

Udayavani is now on Telegram. Click here to join our channel and stay updated with the latest news.

Next