Advertisement

ಸಚಿವ ಜಗದೀಶ್ ಶೆಟ್ಟರ್ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಕಣ್ಮರೆ‌

03:01 PM Jul 01, 2020 | keerthan |

ಶಿವಮೊಗ್ಗ: ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರ ಶಿವಮೊಗ್ಗ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರವೇ ಕಾಣದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

Advertisement

ಜಿಲ್ಲಾ ಪ್ರವಾಸದಲ್ಲಿರುವ ಕೈಗಾರಿಕಾ ಸಚಿವರು, ಶಿವಮೊಗ್ಗ ತಾಲೂಕಿನ ದೇವಕಾತಿ ಕೊಪ್ಪ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿದರು. ಕೈಗಾರಿಕಾ ಪ್ರದೇಶ ಅಭಿವೃದ್ಧಿ ಸಂಬಂಧ ಪರಿಶೀಲನೆಗೆ ಸಚಿವರು ಅಗಮಿಸಿದ್ದು.

ಆದರೆ ಕೈಗಾರಿಕಾ ಪ್ರದೇಶದಲ್ಲಿ ನಡೆಯುತ್ತಿರುವ ಉದ್ಯಮಿಗಳ ಸಭೆಯಲ್ಲಿ ಸಾಮಾಜಿಕ ಅಂತರ ಕಣ್ಮರೆ‌ಯಾಗಿತ್ತು.

ಉದ್ಯಮಿಗಳು, ಕಾರ್ಯಕರ್ತ ರಿಂದಾಗಿ ಉಂಟಾದ ನೂಕು- ನುಗ್ಗಲು ಉಂಟಾಗಿದ್ದು, ಸಚಿವರ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಮರೆಯಾಗಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next