Advertisement

ಸಿದ್ದರಾಮಯ್ಯ ಭೇಟಿ ಮಾಡಲು ಮುಗಿಬಿದ್ದ ಕಾರ್ಯಕರ್ತರು: ಎಲ್ಲೂ ಕಾಣದ ಸಾಮಾಜಿಕ ಅಂತರ

02:43 PM Jun 03, 2020 | keerthan |

ಕೊಪ್ಪಳ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೊಪ್ಪಳದ ಪ್ರವಾಸಿ ಮಂದಿರಕ್ಕೆ ಆಗಮಿಸಿದ್ದ ವೇಳೆ ಎಲ್ಲಿಯೂ ಸಾಮಾಜಿಕ ಅಂತರ ಕಾಣಲೇ ಇಲ್ಲ. ಜನರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಮುಗಿ ಬಿದ್ದರು.

Advertisement

ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರಕ್ಕೆ ಭೇಟಿ ನೀಡಲು ಕೊಪ್ಪಳ ತಾಲೂಕಿನ ಬಸಾಪೂರ ಬಳಿ ಇರುವ ಲಘು ವಿಮಾನ ನಿಲ್ದಾಣಕ್ಕೆ ಬಂದಿಳಿದು ಬಳಿಕ ಕೊಪ್ಪಳದ ಪ್ರವಾಸಿ ಮಂದಿರಕ್ಕೆ ಆಗಮಿಸಿದ್ದರು.

ಈ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಅವರನ್ನು ಭೇಟಿ ಮಾಡಲು ಮುಗಿ ಬಿದ್ದಿದ್ದರು. ಕೋವಿಡ್-19 ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರ ಕಾಪಾಡಿ ಎಂದು ಪದೇ ಪದೆ ಹೇಳುತ್ತಿದ್ದರೂ ಅದ್ಯಾವುದನ್ನೂ ಲೆಕ್ಕಿಸದೆ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವ ತವಕದಲ್ಲಿ ತಲ್ಲೀನರಾಗಿದ್ದರು. ಪೊಲೀಸರು ಜನರ ದಟ್ಟಣೆ ತಡೆಯಲು ಪ್ರಯತ್ನಿಸಿದರು

Advertisement

Udayavani is now on Telegram. Click here to join our channel and stay updated with the latest news.

Next