Advertisement

ಇನ್ನೂ ಪರಿಹಾರ ಸಿಕ್ಕಿಲ್ಲ: ಐವನ್‌ ಆರೋಪ

12:08 AM Sep 22, 2019 | Team Udayavani |

ಮಂಗಳೂರು: ರಾಜ್ಯದಲ್ಲಿ ಧಾರಾಕಾರ ಮಳೆ ಮತ್ತು ಪ್ರವಾಹ ಬಂದು 50 ದಿನಗಳಾಗಿವೆ. 35,000 ಕೋಟಿ ರೂ.ಗಳಿಗೂ ಅಧಿಕ ನಷ್ಟವಾಗಿದ್ದರೂ ರಾಜ್ಯ ಸರಕಾರ ಕೇವಲ 1500 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ”ಸೋಜಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

ಸಂತ್ರಸ್ತರಿಗೆ ತುರ್ತು ಪರಿಹಾರವಾಗಿ 10 ತಿಂಗಳ ಕಾಲ ತಲಾ 5000 ರೂ. ಮನೆ ಬಾಡಿಗೆ, 10,000 ರೂ. ಪರಿಹಾರ, ಮನೆ ಕಟ್ಟಲು ಸಹಾಯಧನ ಮತ್ತಿತರ ಭರವಸೆಗಳನ್ನು ಸಿಎಂ ಯಡಿಯೂರಪ್ಪ ನೀಡಿದ್ದರು. ಆದರೆ 10,000 ರೂ. ಬಿಟ್ಟರೆ ಯಾವ ಭರವಸೆಯೂ ಈಡೇರಿಲ್ಲ ಎಂದವರು ಆರೋಪಿಸಿದರು.

26ರಂದು ಸತ್ಯಾಗ್ರಹ: ಮುಖ್ಯಮಂತ್ರಿ ಭರವಸೆ ನೀಡಿದಂತೆ ಸಂತ್ರಸ್ತರಿಗೆ ಎಲ್ಲ ಬಗೆಯ ಸವಲತ್ತುಗಳನ್ನು ಕೂಡಲೇ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ ಪಕ್ಷದಿಂದ ಸೆ.26ರಂದು ಬೆಳಗಾವಿಯಲ್ಲಿ ದೊಡ್ಡ ಮಟ್ಟದ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ. ಅಲ್ಲದೆ, ಕರಾವಳಿಯಲ್ಲೂ ಸತ್ಯಾಗ್ರಹಕ್ಕೆ ನಿರ್ಧರಿಸಲಾಗಿದೆ ಎಂದು ವಿವರಿಸಿದರು.

ಕಾಂಗ್ರೆಸ್‌ ಮುಖಂಡರಾದ ಇಬ್ರಾಹಿಂ ಕೋಡಿಜಾಲ್‌, ಶಶಿಧರ ಹೆಗ್ಡೆ, ಭಾಸ್ಕರ ಮೊಯ್ಲಿ, ನವೀನ್‌ ಡಿ’ಸೋಜಾ ಮತ್ತಿತರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next