Advertisement

ಉಪಚುನಾವಣೆ ನಡೆಯುವ ಕ್ಷೇತ್ರಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ ಇಲ್ಲ: ಸಿಎಂ ಯಡಿಯೂರಪ್ಪ

10:57 AM Feb 28, 2021 | Team Udayavani |

ಬೆಂಗಳೂರು: ಮುಂದಿನ ದಿನಗಳಲ್ಲಿ ಉಪಚುನಾವಣೆ ನಡೆಯುವ ನಾಲ್ಕು ಕ್ಷೇತ್ರಗಳಿಗೆ ಯಾವುದೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವುದಿಲ್ಲ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದರು.

Advertisement

ಶಿವಮೊಗ್ಗಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವುದಿಲ್ಲ. ಈಗಾಗಲೇ ಉಪಚುನಾವಣೆ ಕ್ಷೇತ್ರಗಳಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ಉಪಚುನಾವಣೆಗಳಲ್ಲಿ ನೂರಕ್ಕೆ ನೂರು‌ ನಾವೇ ಗೆಲ್ಲುತ್ತೇವೆ ಎಂದರು.

ಇದನ್ನೂ ಓದಿ:ಎಸೆಸೆಲ್ಸಿ : ಶೇ. 30ರಷ್ಟು ಪಠ್ಯ ಕಡಿತ : ಮಂಗಳೂರಿನಲ್ಲಿ ಸಚಿವ ಸುರೇಶ್‌ ಕುಮಾರ್‌ ಹೇಳಿಕೆ

ಈಗ ಶಿವಮೊಗ್ಗಕ್ಕೆ ಹೊರಟಿದ್ದೇನೆ. ಸೊರಬ ತಾಲ್ಲೂಕಿನಲ್ಲಿ ಕಾರ್ಯಕ್ರಮ ಇದೆ. ಸೊರಬದಿಂದ ಶಿವಮೊಗ್ಗಕ್ಕೆ ಬಂದು ಸಮಾರಂಭದಲ್ಲಿ ಭಾಗವಹಿಸುತ್ತೇನೆ. ನಾಳೆ ಬೆಂಗಳೂರಿಗೆ ವಾಪಸ್ ಬರುತ್ತೇನೆ. ಈಗಾಗಲೇ ಬಜೆಟ್ ಸಂಬಂಧಿಸದಂತೆ ಎಲ್ಲ ಚರ್ಚೆ ಮುಗಿದಿದೆ. ನಾಳೆ ಬಜೆಟ್ ಸಿದ್ಧತೆ ಅಂತಿಮಗೊಳಿಸುತ್ತೇನೆ ಎಂದರು.

ಪಂಚಮಸಾಲಿ ಸ್ವಾಮೀಜಿಗಳಿಂದ ಬೇಡಿಕೆ ಈಡೇರಿಕೆಗೆ ಗಡುವು ವಿಚಾರವಾಗಿ ಕೇಳಿದ ಪ್ರಶ್ನೆಗೆ ಸಿಎಂ ಯಾವುದೇ ಪ್ರತಿಕ್ರಿಯೆ ಕೊಡದೇ ಹೊರಟರು.

Advertisement

ಇದನ್ನೂ ಓದಿ: ಪುತ್ತೂರು ಜಿಲ್ಲೆಯಾದರೆ ಬೆಳ್ತಂಗಡಿಗೂ ಅನುಕೂಲ: ಪ್ರದೇಶವಾರು ಮೂಲ ಸೌಕರ್ಯ ಅಭಿವೃದ್ಧಿ ಸಾಧ್ಯ

Advertisement

Udayavani is now on Telegram. Click here to join our channel and stay updated with the latest news.

Next