Advertisement

ರಾಜೀನಾಮೆ ಹೇಳಿಕೆ ನೀಡಿಲ್ಲ

10:55 PM Feb 23, 2020 | Lakshmi GovindaRaj |

ದಾವಣಗೆರೆ: ಮಹೇಶ್‌ ಕುಮಟಳ್ಳಿಗೆ ಸಚಿವ ಸ್ಥಾನ ನೀಡದೇ ಇದ್ದರೆ ರಾಜೀನಾಮೆ ಕೊಡುವುದಾಗಿ ಹೇಳಿಕೆ ನೀಡಿಲ್ಲ ಎಂದು ಜಲಸಂಪನ್ಮೂಲ ಸಚಿವರಮೇಶ್‌ ಜಾರಕಿಹೊಳಿ  ಸ್ಪಷ್ಟಪಡಿಸಿದ್ದಾರೆ. ಭಾನುವಾರ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಹೇಶ್‌ ಕುಮಟಳ್ಳಿಗೆ ಸಚಿವ ಸ್ಥಾನ ನೀಡದೇ ಇದ್ದರೆ ರಾಜೀನಾಮೆ ಕೊಡುವುದಾಗಿ ಹೇಳಿಯೇ ಇಲ್ಲ.

Advertisement

ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಯಾರಿಗೆ ಸ್ಪಷ್ಟೀಕರಣ ನೀಡಬೇಕೋ ಅವರಿಗೆ ನೀಡುತ್ತೇನೆ. ನೀವು (ಮಾಧ್ಯಮದವರು) ಗೊಂದಲ ಮಾಡಬೇಡಿ. ಮಹೇಶ್‌ ಕುಮಟಳ್ಳಿ ಅವರಿಗೆ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ಸಿಗುತ್ತದೆ. ಈಗ ಅವರಿಗೆ ನಿಗಮದ ಅಧ್ಯಕ್ಷ ಸ್ಥಾನ ಕೊಟ್ಟರೆ ಸಂತೋಷವಾಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next