Advertisement

Central Cabinet Seat Offer…ಕಾಂಗ್ರೆಸ್ ಹೇಳಿಕೆಗೆ ಸಂಸದೆ ಸುಪ್ರಿಯಾ ಸುಳೆ ಹೇಳಿದ್ದೇನು?

04:07 PM Aug 16, 2023 | Team Udayavani |

ಮುಂಬೈ: ಎನ್ ಸಿಪಿ ನಾಯಕ ಶರದ್ ಪವಾರ್ ಮತ್ತು ಸುಪ್ರಿಯಾ ಸುಳೆಗೆ ಕೇಂದ್ರ ಸಚಿವ ಸ್ಥಾನದ ಆಫರ್ ನೀಡಲಾಗಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಸಂಸದೆ ಸುಪ್ರಿಯಾ ಬುಧವಾರ ತೀಕ್ಷ್ಣ ವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ನಾಯಕರು ಏಕೆ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.

ಕೇಂದ್ರ ಸಚಿವ ಸ್ಥಾನದ ಕುರಿತಾಗಿ ನನಗೆ ಅಂತಹ ಯಾವುದೇ ಪ್ರಸ್ತಾಪ ಬಂದಿಲ್ಲ ಮತ್ತು ಯಾರೂ ನನ್ನೊಂದಿಗೆ ಯಾವುದೇ ಮಾತುಕತೆ ನಡೆಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಮಹಾರಾಷ್ಟ್ರ ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚೌಹಾಣ್ ಅವರು ಸುಪ್ರಿಯಾ ಅಥವಾ ಅವರ ತಂದೆಗೆ ಕೇಂದ್ರ ಸಚಿವ ಸ್ಥಾನದ ಆಫರ್ ನೀಡಲಾಗಿದೆ ಎಂದು ಹೇಳಿದ್ದರು.

ನಾನು ವೈಯಕ್ತಿಕವಾಗಿ ಹಿರಿಯ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಗೌರವ್ ಗೊಗೋಯ್ ಅವರೊಂದಿಗೆ ಸಂಪರ್ಕದಲ್ಲಿದ್ದೇನೆ ಆದರೆ ಮಹಾರಾಷ್ಟ್ರದ ನಾಯಕರೊಂದಿಗೆ ಸಂಪರ್ಕದಲ್ಲಿಲ್ಲ ಎಂದು ಹೇಳಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next