Advertisement

ನಾಳೆ ‘ಭಾನುವಾರದ ಲಾಕ್ ಡೌನ್’ ಇರುವುದಿಲ್ಲ; ಯಥಾಸ್ಥಿತಿ ಮುಂದುವರಿಕೆ

03:06 PM Jun 06, 2020 | keerthan |

ಬೆಂಗಳೂರು: ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಈ ಹಿಂದೆ ರಾಜ್ಯ ಸರಕಾರ ಆದೇಶಿಸಿದ್ದ ‘ಭಾನುವಾರದ ಲಾಕ್ ಡೌನ್’ ನಾಳೆ ಇರುವುದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳ ಸಚಿವಾಲಯದ ಮೂಲಗಳು ತಿಳಿಸಿವೆ.

Advertisement

ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಸದ ಬಳಿಕ ಕೋವಿಡ್-19 ಸೋಂಕು ನಿಯಂತ್ರಣದ ಮತ್ತೊಂದು ವಿಧಾನವಾಗಿ ಭಾನುವಾರದ ಲಾಕ್ ಡೌನ್ ಗೆ ರಾಜ್ಯ ಸರಕಾರ ಆದೇಶಿಸಿತ್ತು. ನಂತರ ಮೊದಲ ಭಾನುವಾರ ಅಂದರೆ ಮೇ 24ರಂದು ಲಾಕ್ ಡೌನ್ ಮಾಡಲಾಗಿತ್ತು. ರಾಜ್ಯದಲ್ಲಿ ಈ ಲಾಕ್ ಡೌನ್ ಬಹುತೇಕ ಯಶಸ್ವಿಯಾಗಿತ್ತು.

ಆದರೆ ಅದರ ನಂತರದ ಭಾನುವಾರ ಅಂದರೆ ( ಮೇ 31) ರಂದು ಈ ಲಾಕ್ ಡೌನ್ ತೆರವುಗೊಳಿಸಲಾಗಿತ್ತು. ಸದ್ಯ ಬಹುತೇಕ ಎಲ್ಲಾ ಲಾಕ್ ಡೌನ್ ನಿರ್ಬಂಧಗಳು ಸಡಿಲವಾಗಿರುವ ಕಾರಣ ಇನ್ನೂ ಈ ಭಾನುವಾರದ ಲಾಕ್ ಡೌನ್ ಮುಂದುವರಿಯುವುದು ಅನುಮಾನ ಎನ್ನಲಾಗಿದೆ. ಆದರೆ ರಾತ್ರಿಯ ವೇಳೆಯ ಕರ್ಫ್ಯೂ ಯಥಾಸ್ಥಿತಿಯಂತೆ ಮುಂದುವರಿಯಲಿದೆ ಎನ್ನಲಾಗಿದೆ.

ನಾಳೆ (ಜೂ.7) ರವಿವಾರ ಲಾಕ್ ಡೌನ್ ರದ್ದಾಗಿರುವ ಬಗ್ಗೆ ಅಧಿಕೃತ ಆದೇಶ ಇಂದು ಸಂಜೆಯ ವೇಳೆಗೆ ಮುಖ್ಯಮಂತ್ರಿ ಸಚಿವಾಲಯದಿಂದ ಬರುವ ನಿರೀಕ್ಷೆಯಿದೆ.

Advertisement

Udayavani is now on Telegram. Click here to join our channel and stay updated with the latest news.

Next