Advertisement

ರಾಯಚೂರು: ಭಾರತ್ ಬಂದ್ ಗಿಲ್ಲ ಬೆಂಬಲ

12:26 PM Jan 08, 2020 | keerthan |

ರಾಯಚೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಧೋರಣೆ ಖಂಡಿಸಿ ದೇಶವ್ಯಾಪಿ ಕರೆ ನೀಡಿದ ಭಾರತ್ ಬಂದ್ ಗೆ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗಿಲ್ಲ.

Advertisement

ನಗರದ ಡಾ.ಅಂಬೇಡ್ಕರ್ ವೃತ್ತದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವಗಳಲ್ಲಿ ಸಾವಿರಾರು ಕಾರ್ಮಿಕರು ಧರಣಿ ಹಮ್ಮಿಕೊಂಡಿದ್ದು ಬಿಟ್ಟರೆ ಯಾವುದೇ ಬಂದ್ ನಡೆದಿಲ್ಲ. ಹೀಗಾಗಿ ಸಾರ್ವಜನಿಕರಿಗೆ ಯಾವುದೇ ಅನನುಕೂಲವಾಗದೆ ಸಾರ್ವಜನಿಕ ಜೀವನ ಯಥಾಸ್ಥಿತಿಯಲ್ಲಿದೆ.

ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅದು ಬಿಟ್ಟರೆ ಜನ ಜೀವನ ಎಂದಿನಂತಿದೆ. ಬೆಳಗ್ಗೆಯಿಂದಲೇ ಸಾರಿಗೆ ಸೌಲಭ್ಯ ಲಭ್ಯವಿದ್ದು, ಶಾಲೆ ಕಾಲೇಜುಗಳು ಎಂದಿನಂತೆ ನಡೆಯುತ್ತಿವೆ.

Advertisement

Udayavani is now on Telegram. Click here to join our channel and stay updated with the latest news.

Next