Advertisement

ವಿಧಾನಸೌಧ ಹರಾಜು ಹಾಕಿದರೂ ಅಚ್ಚರಿ ಇಲ್ಲ: ಅಶೋಕ್‌ ಕಿಡಿ

12:35 AM Jun 19, 2024 | Team Udayavani |

ಬೆಂಗಳೂರು: ತಮ್ಮ ಪಾಪರ್‌ ಸರಕಾರವನ್ನು ಉಳಿಸಿಕೊಳ್ಳಲು 25,000 ಎಕರೆ ಸಾರ್ವಜನಿಕ ಆಸ್ತಿಯನ್ನು ಬಳಸಿಕೊಳ್ಳಲು ಹೊರಟಿದ್ದೀರಿ. ಮುಂದೊಂದು ದಿನ ತಾವು ವಿಧಾನಸೌಧವನ್ನೇ ಅಡ ಇಟ್ಟರೂ, ಹರಾಜು ಹಾಕಿದರೂ ಅಚ್ಚರಿ ಪಡಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

Advertisement

ಸಾಮಾಜಿಕ ಜಾಲತಾಣ “ಎಕ್ಸ್‌’ನಲ್ಲಿ, 15 ಬಜೆಟ್‌ ಮಂಡಿಸಿ ಸ್ವಯಂ ಘೋಷಿತ ಆರ್ಥಿಕ ತಜ್ಞರಾದ ತಮಗೆ ರಾಜ್ಯದ ಬಜೆಟ್‌ ಮಂಡಿಸುವಾಗ ಸರಕಾರದ ಆದಾಯ, ವೆಚ್ಚದ ಬಗ್ಗೆ ಜ್ಞಾನವಿರಲಿಲ್ಲವೇ? ಬಜೆಟ್‌ ಮಂಡಿಸಿದ ನಾಲ್ಕೇ ತಿಂಗಳಲ್ಲಿ ಪೆಟ್ರೋಲ್‌ ಡೀಸೆಲ್‌ ಬೆಲೆ ಏರಿಸಿದ್ದಾಯಿತು. ಈಗ 25,000 ಎಕರೆ ಸಾರ್ವಜನಿಕ ಆಸ್ತಿಯನ್ನು ಸಂಪನ್ಮೂಲ ಕ್ರೂಢೀಕರಣಕ್ಕೆ ಬಳಸಿಕೊಳ್ಳಲು ಹೊರಟಿದ್ದೀರಿ. ಇದೇನಾ ಬಜೆಟ್‌ ರಚನೆ ಬಗ್ಗೆ ತಮಗಿರುವ ಪಾಂಡಿತ್ಯ? ಇದೇನಾ ತಾವು ಜಂಭ ಕೊಚ್ಚಿಕೊಳ್ಳುವ ಬುದ್ಧಿವಂತಿಕೆ? ಎಂದು ಅವರು ಅಣುಕಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next