Advertisement

ಡಿ.ಜೆ ಹಳ್ಳಿ ಗಲಭೆಯ ಹಿಂದೆ ವ್ಯವಸ್ಥಿತ ಸಂಚು, ಯಾರೂ ಕಾನೂನು ಕೈಗೆತ್ತಿಕೊಳ್ಳಬೇಡಿ: ಡಿಕೆಶಿ

11:23 AM Aug 12, 2020 | Mithun PG |

ಬೆಂಗಳೂರು:  ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು  ಗಲಭೆ ನಡೆಸಿರುವುದನ್ನು ಖಂಡಿಸುತ್ತೇನೆ. ಕಾನೂನು ಕೈಗೆ ತೆಗೆದುಕೊಳ್ಳುವ ಕೆಲಸವನ್ನು ಯಾರು  ಮಾಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

Advertisement

ಶಾಸಕರಾಗಲಿ, ಯಾರೇ ಆಗಲಿ ಅವರ ಮೇಲೆ ದಾಳಿ ಮಾಡಬಾರದು. ಪ್ರಚೋದನಕಾರಿ ಪೋಸ್ಟ್ ಕೂಡ ಸರಿಯಲ್ಲ.  ಬೆಂಗಳೂರು‌ ಶಾಸಕರ ಸಭೆ ಕರೆದಿದ್ದೇನೆ. ಅಲ್ಲಿ ಚರ್ಚೆ ಮಾಡುತ್ತೇವೆ. ಘಟನೆಯೆ ಹಿಂದೆ ವ್ಯವಸ್ಥಿತವಾದ ಸಂಚು ಇದೆ ಎಂದಿದ್ದಾರೆ.

ಬಿ ಎಲ್ ಸಂತೋಷ್ ರಾಜಕಾರಣ ಮಾಡುತ್ತಿದ್ದಾರೆ.  ರಾತ್ರಿಯಿಂದ ಘಟನೆಯ ಬಗ್ಗೆ ನಾನು ಮಾಹಿತಿ ಪಡೆದಿದ್ದೇನೆ. ನಮ್ಮ ಶಾಸಕರು ಕೂಡ ಸ್ಥಳಕ್ಕೆ ಹೋಗಿ ಶಾಂತಿ ನೆಲೆಸುವಂತೆ ಪ್ರಯತ್ನ ಮಾಡಿದ್ದಾರೆ. ಸಚಿವ ಸಿಟಿ ರವಿ ಅಥವಾ ಇನ್ಯಾರದ್ದೋ  ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next