Advertisement

ರಾಜಕೀಯ ನಿವೃತ್ತಿ ಚಿಂತನೆ ಇಲ್ಲ: ಶಾಮನೂರು ಶಿವಶಂಕರಪ್ಪ

09:45 PM Mar 05, 2023 | Team Udayavani |

ನಾಯಕನಹಟ್ಟಿ: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಚುನಾವಣ ರಾಜಕೀಯದಿಂದ ನಿವೃತ್ತಿ ಪಡೆದಿದ್ದಾರೆ. ನನಗೆ ಅಂತಹ ಚಿಂತನೆ ಇಲ್ಲ ಎಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1994ರಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪ ರ್ಧಿಸುತ್ತಿದ್ದೇನೆ. ಈ ಬಾರಿಯೂ ದಾವಣಗೆರೆ ದಕ್ಷಿಣ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದು, ಅದರಲ್ಲಿ ಯಾವುದೇ ಅನುಮಾನವಿಲ್ಲ. ಟಿಕೆಟ್‌ ಘೋಷಣೆಯಾದ ಕೂಡಲೇ ಚುನಾವಣೆಗೆ ಸಿದ್ಧತೆ ಆರಂಭಿಸುತ್ತೇನೆ. ಇದು ನನಗೆ ಆರನೇ ಚುನಾವಣೆಯಾಗಿದ್ದು ಮತ್ತೂಮ್ಮೆ ಗೆಲ್ಲುವ ವಿಶ್ವಾಸವಿದೆ. ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ನಡುವೆ ಯಾವುದೇ ಸಮಸ್ಯೆಯಿಲ್ಲ. ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದ ಲಂಚದ ವಿಷಯಗಳು ಕೇಳಿ ಬರುತ್ತಿದ್ದು, ಕಾಂಗ್ರೆಸ್‌ಗೆ ಇದರಿಂದ ಅನುಕೂಲವಾಗಲಿದೆ.

ಚುನಾವಣೆಯಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರುವುದು ಶತಃಸಿದ್ಧ. ಉಪ್ಪು ತಿಂದವ ನೀರು ಕುಡಿಯಬೇಕು ಎನ್ನುವ ಗಾದೆಯಂತೆ ಮಾಡಾಳು ವಿರೂಪಾಕ್ಷಪ್ಪ ಅಪರಾಧ ಮಾಡಿದ್ದರೆ ಶಿಕ್ಷೆ ಆಗಲೇಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next