Advertisement

ನಿಯಮ 69 ರ ಚರ್ಚೆಗೆ ಸಮಯವೇಕಿಲ್ಲ? :ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿಆಕ್ಷೇಪ

08:12 PM Mar 21, 2022 | Team Udayavani |

ವಿಧಾನಸಭೆ : ಬಜೆಟ್ ಅಧಿವೇಶನ ಸಂದರ್ಭದಲ್ಲಿ‌ ನಿಯಮ 69 ರ ಅನ್ವಯ ಚರ್ಚೆಗೆ ಅವಕಾಶ ನೀಡದೇ ಇರುವ ಬಗ್ಗೆ ಕಾಂಗ್ರೆಸ್ ಶಾಸಕರು ಈಗ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಕ್ಷೇಪ ವ್ಯಕ್ತವಾಗಿದೆ.

Advertisement

ವಿಪಕ್ಷ ನಾಯಕ‌ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾಗಿದೆ. ಕಾಂಗ್ರೆಸ್ ಮಂಡಿಸಿರುವದೂ ಸೇರಿದಂತೆ  ನಾಲ್ಕು ನಿಲುವಳಿ ಸೂಚನೆಯನ್ನು ನಿಯಮ 69 ಕ್ಕೆ ಪರಿವರ್ತಿಸಲಾಗಿದೆ. ಆದರೆ ಇದುವರೆಗೂ ಒಂದು ವಿಚಾರದ ಬಗ್ಗೆಯೂ ಚರ್ಚೆ ನಡೆದಿಲ್ಲ. ಇದು ಕಾಂಗ್ರೆಸ್ ಶಾಸಕರ ಆಕ್ಷೇಪಕ್ಕೆ ಕಾರಣವಾಗಿದೆ.

ಇದರ ಜತೆಗೆ ಬಿಟ್ ಕಾಯಿನ್, 40 ಪರ್ಸೆಂಟ್ ಕಮಿಷನ್, ಕಾನೂನು ಮತ್ತು ಸುವ್ಯವಸ್ಥೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಸದನದಲ್ಲಿ ಚರ್ಚೆ ನಡೆಸುವುದಕ್ಕೆ ಅವಕಾಶ ನೀಡಬೇಕೆಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆಯಾಗಿದೆ.

28ಕ್ಕೆಪಾಟೀಲ್ ಅಧಿಕಾರ : ಇದರ ಜತೆಗೆ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ.ಪಾಟೀಲ್ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದ‌ ಸಿದ್ಧತೆ ಬಗ್ಗೆ ಚರ್ಚಿಸಲಾಗಿದೆ‌. ಮಾರ್ಚ್ 28ಕ್ಕೆ ಅಧಿಕಾರ ಸ್ವೀಕಾರ ಸಮಾರಂಭ ನಡೆಯುತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next