Advertisement

ಬಿಜೆಪಿಯಲ್ಲಿ ವಲಸಿಗರಿಗೆ ತೊಂದರೆಯಿಲ್ಲ: ಕೃಷಿ ಸಚಿವ ಬಿ.ಸಿ. ಪಾಟೀಲ್‌

09:00 PM May 09, 2022 | Team Udayavani |

ಬೆಂಗಳೂರು: ಬಿಜೆಪಿಯಲ್ಲಿ ವಲಸಿಗರಿಗೆ ಯಾವುದೇ ತೊಂದರೆಯಿಲ್ಲ. ನಮಗ್ಯಾರಿಗೂ ಬೇಸರವಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್‌ ಹೇಳಿದ್ದಾರೆ.

Advertisement

ಸೋಮವಾರ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವರಿಷ್ಠರು ರಾಜ್ಯಕ್ಕೆ ಆಗಮಿಸಿ ಅವರ ಕರ್ತವ್ಯ ಮಾಡುತ್ತಾರೆ. ಅಂತೆಯೇ ಪಕ್ಷದ ಆಜ್ಞೆಯನ್ನು ನಾವು ಪಾಲಿಸುತ್ತಾ ನಮ್ಮ ಕರ್ತವ್ಯ ನಿಭಾಯಿಸುತ್ತೇವೆ.

ಬೂತ್‌ ಮಟ್ಟದಲ್ಲಿ ಸಂಘಟನೆ ಚೆನ್ನಾಗಿದೆ. ಪ್ರಧಾನಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳ ಕಾರ್ಯವೈಖರಿ ನೋಡಿ ಬಹಳಷ್ಟು ಜನ ಬಿಜೆಪಿಯತ್ತ ವಾಲುತ್ತಿದ್ದಾರೆ . ಬಿಜೆಪಿ ಸರಕಾರದಲ್ಲಿ ಹೇಳಲು ಸಾಧನೆಗಳು ಸಾಕಷ್ಟು ಇವೆ.

ಬಿಜೆಪಿಯಲ್ಲಿ ಶಿಷ್ಟಾಚಾರ ವ್ಯವಸ್ಥೆಯಿದೆ. ಬಿಜೆಪಿ ಬಿಟ್ಟರೆ ಬೇರೆ ಯಾವುದೇ ಪಕ್ಷದಲ್ಲೂ ಇಂತಹ ವ್ಯವಸ್ಥೆ ಇಲ್ಲ. ಕಾಂಗ್ರೆಸ್‌ನವರಿಗೆ ಅಪಪ್ರಚಾರ ಮಾಡುವುದೇ ಕೆಲಸವಾಗಿದೆ ಎಂದರು.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್‌ ಟೆಂಗಿನಕಾಯಿ, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್‌.ಶಿವಪ್ರಸಾದ್‌ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next