Advertisement

ಪೌರತ್ವ ಕಾಯ್ದೆಯಿಂದ ಇಲ್ಲ ತೊಂದರೆ

11:05 PM Jan 26, 2020 | Team Udayavani |

ಸಿರಿಗೆರೆ (ಚಿತ್ರದುರ್ಗ ಜಿಲ್ಲೆ): ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೇಶದ ನಾಗರಿಕರು ಆತಂಕ ಪಡಬೇಕಾಗಿಲ್ಲ. ಆದರೆ, ಈ ಕಾಯ್ದೆ ವಿರೋಧಿಸುವ ನೆಪದಲ್ಲಿ ಸಾರ್ವಜನಿಕರ ಆಸ್ತಿಗೆ ಹಾನಿ ಉಂಟು ಮಾಡುವುದು ದೇಶದ್ರೋಹದ ಕೆಲಸ ಎಂದು ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

Advertisement

ಸಿರಿಗೆರೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಈ ಹಿಂದೆಯೇ ರೂಪುಗೊಂಡಿದ್ದ ಪೌರತ್ವ ತಿದ್ದುಪಡಿ ಕಾಯ್ದೆಗೆ ಈಗಿನ ಕೇಂದ್ರ ಸರ್ಕಾರ ಹಲವು ತಿದ್ದುಪಡಿ ತಂದು ಜಾರಿಗೊಳಿಸಿದೆ. ಇದರಿಂದ ದೇಶದ ಜನ ಆತಂಕ ಪಡಬೇಕಿಲ್ಲ. ಆದರೆ, ದೆಹಲಿ ಸೇರಿದಂತೆ ವಿವಿಧೆಡೆ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಈ ಕಾಯ್ದೆಗೆ ಧಾರ್ಮಿಕ ತಾರತಮ್ಯದ ಲೇಪ ಹಚ್ಚಲಾಗಿದೆ ಎಂದರು.

ಸ್ವಾತಂತ್ರ ಬಂದಾಗ ಉಂಟಾಗಿದ್ದ ಪ್ರತಿಭಟನೆ ಪೌರತ್ವ ತಿದ್ದುಪಡಿ ಕಾಯ್ದೆ ಹಿನ್ನೆಲೆಯಲ್ಲಿ ಮತ್ತೆ ಭುಗಿಲೆದ್ದಿದೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ, ವಿರೋಧ ವ್ಯಕ್ತಪಡಿ ಸುವುದು ಸಾಮಾನ್ಯ ಪ್ರಕ್ರಿಯೆ. ಅಭಿಪ್ರಾಯವನ್ನು ಮುಕ್ತ ಮನಸ್ಸಿನಿಂದ ಅಭಿವ್ಯಕ್ತಗೊಳಿಸಬಹುದು. ಆದರೆ ಸಾರ್ವಜನಿಕ ಆಸ್ತಿಗೆ ಹಾನಿ, ವಿವಿಗಳಲ್ಲಿ ವಿದ್ಯಾರ್ಥಿಗಳು ಹಿಂಸಾಚಾರದಲ್ಲಿ ತೊಡಗುವುದು ಶೋಭೆ ತರುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next