Advertisement

ಕೆಲಸ ಮಾಡದ ಮೈತ್ರಿ ಸರ್ಕಾರ, ಸಿದ್ದು ಸಿಎಂ ಆಗಲಿ 

06:00 AM Sep 25, 2018 | Team Udayavani |

ವಿಜಯಪುರ: ಸಿದ್ದರಾಮಯ್ಯ ಸರ್ಕಾರದಲ್ಲಿ ಜನತೆಗೆ ನೀಡಿದ ಎಲ್ಲ ಅಭಿವೃದ್ಧಿ ಕೆಲಸ ಆಗುತ್ತಿದ್ದವು. ಆದರೆ, ಈಗಿನ ಮೈತ್ರಿ ಸರ್ಕಾರದಲ್ಲಿ ಯಾವುದೇ ಕೆಲಸ ಆಗುತ್ತಿಲ್ಲ. ಹೀಗಾಗಿ, ಸಿದ್ದರಾಮಯ್ಯ ಮತ್ತೂಮ್ಮೆ ಸಿಎಂ ಆಗಲೇಬೇಕೆಂದು ಇಂಡಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಮೈತ್ರಿ ಸರ್ಕಾರದ ವಿರುದ್ಧ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆಡಳಿತ ನಡೆಸುವವರಿಗೆ ಸೂಕ್ಷ್ಮ ಪರಿಜ್ಞಾನವಿರಬೇಕು. ಅದು ಇಲ್ಲದ ಕಾರಣ ಅಭಿವೃದ್ಧಿಗೆ ಹಿನ್ನಡೆ ಆಗುತ್ತಿದೆ. ನಾನು ವ್ಯಕ್ತಪಡಿಸಿರುವ ಈ ಭಾವನೆ ನನ್ನದಲ್ಲ, ಪಕ್ಷದ ಕಾರ್ಯಕರ್ತರದ್ದು. ಆಡಳಿತ ಪಕ್ಷದ ಶಾಸಕನಾಗಿ ನಾನು ಜವಾಬ್ದಾರಿಯಿಂದ ಮಾತನಾಡುತ್ತಿದ್ದೇನೆ. ಹಾಗಂತ ಪ್ರಸಕ್ತ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ನನ್ನ ಮಾತನ್ನು ಕಾಂಗ್ರೆಸ್‌ನ ಭಿನ್ನಮತ, ಅತೃಪ್ತಿ ಎಂದು ಬಿಂಬಿಸುವ ಅಗತ್ಯವಿಲ್ಲ. ಮೈತ್ರಿ ಸರ್ಕಾರದ ಕಾರ್ಯವೈಖರಿ ಕುರಿತು ಜನತೆಯ ಭಾವನೆಯನ್ನು ಹೇಳಬೇಕಿದೆ. ಮಂಗಳವಾರ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ನಮ್ಮ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಈ ಕುರಿತು ಚರ್ಚಿಸುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next