Advertisement

Karasevak ಪರ ಪ್ರತಿಭಟನೆಯಲ್ಲಿ ಸಿಎಂ ವಿರುದ್ಧ ಅವಾಚ್ಯ ಶಬ್ದ ಬಳಸಿಲ್ಲ: ಟೆಂಗಿನಕಾಯಿ

02:58 PM Jan 05, 2024 | Team Udayavani |

ಹುಬ್ಬಳ್ಳಿ: ಕರಸೇವಕ ಶ್ರೀಕಾಂತ ಪೂಜಾರಿ ಪರ ಪ್ರತಿಭಟನೆ ವೇಳೆ ಸಿಎಂ ಸಿದ್ದರಾಮಯ್ಯ ಅವರಿಗೆ ಆರ್. ಅಶೋಕ ಆದಿಯಾಗಿ ಯಾರು ಕೂಡ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

Advertisement

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಶ್ರೀಕಾಂತ ಪೂಜಾರಿ ಮೇಲೆ 16 ಕೇಸ್ ಇವೆ ಎಂದು ಬಿಂಬಿಸಿ ಪ್ರಚಾರ ಮಾಡಿದ್ದಾರೆ. ಶ್ರೀಕಾಂತ್ ಮೇಲಿರುವ 16 ಕೇಸ್ ಗಳು ಬಿಡುಗಡೆಯಾಗಿರುವ ಮಾಹಿತಿ ಇದೆ.ಈಗ ಶ್ರೀಕಾಂತರು ಸಿಎಂ ಸಿದ್ದರಾಮಯ್ಯ ಹಾಗೂ ಜಿ. ಪರಮೇಶ್ವರ್ ಮೇಲೆ ಕೇಸ್ ಮಾಡಬೇಕಾ ಎಂದು ಪ್ರಶ್ನಿಸಿದರು.

ಜವಾಬ್ದಾರಿ ಸ್ಥಾನದಲ್ಲಿರುವವರು ಜನರಿಗೆ ಸುಳ್ಳು ಹೇಳಿ ದಾರಿ ತಪ್ಪಿಸುತ್ತಿದ್ದಾರೆ. ಶ್ರೀಕಾಂತ ಮೇಲಿರುವ 16 ಕೇಸ್ ಗಳಲ್ಲಿ 15 ಕೇಸ್ ನಿಂದ ಬಿಡುಗಡೆಯಾಗಿದೆ. ಒಂದು ಸುಳ್ಳು ನೂರು ಬಾರಿ ಹೇಳಿ ಸತ್ಯ ಹೇಳುವ ಪ್ರಯತ್ನ ಮಾಡಿದ್ದಾರೆ. ಶಹರ ಠಾಣೆ ಇನ್ಸ್ ಪೆಕ್ಟರ್ ಅಮಾನತು ಮಾಡಲು ಆಗ್ರಹ ಮಾಡುತ್ತೇವೆ.ಮುಂದೆ ಸರಕಾರ ರಾಜೀನಾಮೆ ಕೊಡುವ ಆಗ್ರಹ ಪರಿಸ್ಥಿತಿ ಬರುತ್ತದೆ. ಸಿಎಂ ಹಾಗೂ ಗೃಹ ಸಚಿವರು ರಾಜ್ಯದ ಜನತೆಯ ಕ್ಷಮೆ ಕೋರಬೇಕೆಂದು ಆಗ್ರಹಿಸುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next