Advertisement

ಬಿಜೆಪಿ ಬಗ್ಗೆ ಅಸಮಾಧಾನ ಇಲ್ಲ: ಎಂಟಿಬಿ ನಾಗರಾಜ್‌

11:03 PM May 02, 2022 | Team Udayavani |

ಬೆಂಗಳೂರು: ಪಕ್ಷಾಂತರದ ಬಗೆಗಿನ ನನ್ನ ಹೇಳಿಕೆ ನೈತಿಕ ಮತ್ತು ಸೈದ್ಧಾಂತಿಕವಾಗಿದೆ. ಯಾರೇ ಆಗಲಿ ಪಕ್ಷಾಂತರ ಮಾಡುವುದು ತಪ್ಪು ಎನ್ನುವ ಅರ್ಥದಲ್ಲಿ ಮಾತನಾಡಿದ್ದೇನೆಯೇ ಹೊರತು ಬಿಜೆಪಿ ಬಗ್ಗೆ ಯಾವುದೇ ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ಪೌರಾಡಳಿತ ಸಚಿವ ಎಂ.ಟಿ.ಬಿ ನಾಗರಾಜ್‌ ಹೇಳಿದ್ದಾರೆ.

Advertisement

ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ಅವರು, ನಾನು ಬಿಜೆಪಿಗೆ ಬಂದಿರುವುದನ್ನು ತಪ್ಪು ಎಂದು ಭಾವಿಸಿಯೂ ಇಲ್ಲ. ಹೇಳಿಯೂ ಇಲ್ಲ. ಬಿಜೆಪಿಯಲ್ಲಿ ನನಗೆ ಯಾವುದೇ ಅಸಮಾಧಾನ ಇಲ್ಲ. ಪಕ್ಷ ಮತ್ತು ನಾಯಕರು ನನ್ನನ್ನು ವಿಶ್ವಾಸದಿಂದ ನಡೆಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:ಹೆದ್ದಾರಿ 66ರಲ್ಲಿ ಭೀಕರ ಅಪಘಾತ : ಕಾರವಾರ ಜಿ.ಪಂ. ಮಾಜಿ ಸದಸ್ಯ ಗಂಭೀರ

ನಾನು ನನ್ನ ಜೀವನದಲ್ಲಿ ಯಾವುದೇ ತಪ್ಪು ಮಾಡಿಲ್ಲ. ಮಾಡಿರುವ ಒಂದೇ ತಪ್ಪೆಂದರೆ ಅದು ಪûಾಂತರ ಮಾಡಿದ್ದು – ಈ ಹೇಳಿಕೆ ನೈತಿಕವಾದದ್ದು ಮತ್ತು ಸೈದ್ಧಾಂತಿಕವಾಗಿದ್ದು, ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಈಗಲೂ ಬಿಜೆಪಿಯಲ್ಲಿದ್ದೇನೆ. ಮುಂದೆಯೂ ಇರುತ್ತೇನೆ. ಬಿಜೆಪಿಯಲ್ಲಿ ನನಗೆ ಯಾವುದೇ ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪಕ್ಷಾಂತರ ಮಾಡಿ ತಪ್ಪು ಮಾಡಿದೆ ಎಂದು ಈಗ ಸಚಿವ ಎಂ.ಟಿ.ಬಿ. ನಾಗರಾಜ ಹೇಳುತ್ತಿದ್ದಾರೆ. ಅವರಿಗೆ ಪಾಪ ಮಾಡಿದ್ದಕ್ಕೆ ಈಗಲಾದರೂ ಪಶ್ಚಾತ್ತಾಪವಾಗಿರುವುದು ಸಮಾಧಾನದ ಸಂಗತಿ.
– ಸಿದ್ದರಾಮಯ್ಯ, ವಿಪಕ್ಷ ನಾಯಕ

Advertisement
Advertisement

Udayavani is now on Telegram. Click here to join our channel and stay updated with the latest news.

Next