Advertisement

ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ : ಪ್ರಹ್ಲಾದ ಜೋಶಿ

03:35 PM May 29, 2021 | Team Udayavani |

ಹುಬ್ಬಳ್ಳಿ: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ. ಹೀಗಾಗಿ ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಲ್ಲವೆಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಸಮರ್ಥರ ಸಂಖ್ಯೆ ಜಾಸ್ತಿ‌ ಇದೆ. ಅವರು ಬಡಿದಾಡುತ್ತಿದ್ದಾರೆ. ಅವರು ಬಡಿದಾಡುತ್ತಿರಲಿ. ಸಮರ್ಥರು ಇದ್ದಾರೋ‌ ಇಲ್ಲೊ ಅನ್ನೊದಕ್ಕಿಂತ, ಇದ್ದವರು ಸಮರ್ಥರಿದ್ದಾರೋ ಇಲ್ಲವೊ, ಅನ್ನುವುದು ಮುಖ್ಯ. ಯಡಿಯೂರಪ್ಪ ಸಮರ್ಥರಿದ್ದಾರೆ. ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ವಯಸ್ಸಿನ ಕಾರಣ ಹೇಳಿ‌ ಅವರನ್ನು ಕೆಳಗಿಳಿಸುತ್ತಾರೆಂಬ ಹೇಳಿಕೆಗಳು ಸತ್ಯಕ್ಕೆ ದೂರವಾಗಿವೆ. ಅವರೇ ಪೂರ್ಣಾವಧಿ ಆಡಳಿತ ನಡೆಸುತ್ತಾರೆ ಎಂದರು.

ನಮ್ಮ ಆದ್ಯತೆ, ಏನೇ ಇದ್ದರು ಕೊರೊನಾ ನಿಯಂತ್ರಿಸುವುದು. ನಾನು ಕೇಂದ್ರ ಸಚಿವನಾಗಿರುವುದರಿಂದ ರಾಜ್ಯದ ಅನೇಕ ಸಚಿವರು, ಶಾಸಕರು ಭೇಟಿಯಾಗುತ್ತಾರೆ. ಕೇಂದ್ರದಿಂದ ಆಗಬೇಕಿರುವ ಕೆಲಸದ ಬಗ್ಗೆ ಹೇಳುತ್ತಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾರು ತಮ್ಮೊಂದಿಗೆ ಚರ್ಚಿಸಿಲ್ಲ ಎಂದರು. ಸಿದ್ದರಾಮಯ್ಯ ಅವರು ನನಗೆ ಪತ್ರ ಬರೆದಿದ್ದರು. ಹೀಗಾಗಿ ಅವರಿಗೆ ಪ್ರತ್ಯುತ್ತರ ಬರೆದಿದ್ದೇನೆ. ಅದರಲ್ಲಿ ಏನು ವಿಶೇಷವಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next