Advertisement

ಗುಡ್ಡ ಕುಸಿತ ಭೀತಿ: ರಾತ್ರಿ ವೇಳೆ ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಇಲ್ಲ ಅನುಮತಿ

06:14 PM Jul 09, 2020 | keerthan |

ಚಿಕ್ಕಮಗಳೂರು: ಜೋರು ಮಳೆಯ ಕಾರಣ ಗುಡ್ಡ ಕುಸಿಯುವ ಸಂಭವವಿರುವ ಕಾರಣ ಚಾರ್ಮಾಡಿ ಘಾಟಿಯಲ್ಲಿ ಸಂಜೆ 7 ರಿಂದ ಬೆಳೆಗ್ಗೆ 7ರ ತನಕ ಯಾವುದೇ ವಾಹನಗಳು ಸಂಚರಿಸದಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಗೌತಮ್ ಬಗಾದಿ ಆದೇಶಿಸಿದ್ದಾರೆ.

Advertisement

ಕಳೆದ ಬಾರಿ ಮಳೆಗಾಲದಲ್ಲಿ ಗುಡ್ಡ ಕುಸಿದಿದ್ದು, ರಸ್ತೆಗಳು ಸಂಪೂರ್ಣ ಹಾಳಾಗಿತ್ತು. ನಂತರ ತಾತ್ಕಾಲಿಕವಾಗಿ ಕೆಲಸ ಪ್ರಾರಂಭಿಸಿ ಬೇಸಿಗೆಯಲ್ಲಿ ಲಘು ವಾಹನ ಸಂಚರಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಈ ಬಾರಿ ಮಳೆ ಜೋರಾಗಿ ಇರುವುದರಿಂದ ಅಲ್ಲಲ್ಲಿ ಮಣ್ಣು ಕುಸಿಯುವ ಸಾಧ್ಯತೆಯಿದೆ. ರಸ್ತೆಗಳಿಗೆ ತಾತ್ಕಾಲಿಕ ತಡೆಗೋಡೆ ನಿರ್ಮಿಸಿದ್ದು , ರಾತ್ರಿಯ ವೇಳೆ ಸಂಚರಿಸಲು ಸೂಕ್ತವಿಲ್ಲ. ಬೃಹತ್ ಗಾತ್ರದ ಮರಗಳು ಉರುಳಿ ಬೀಳುವ, ಭೂ ಕುಸಿತವಾಗುವ ಸಂಭವನೆಗಳು ಇದೆ ಎಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದರು.

ಈ ಕುರಿತು ಪರಿಶೀಲನೆ ಮಾಡಿದ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ. ಗೌತಮ್ ಬಗಾದಿ ಅವರು, ಮುಂದಿನ ಆದೇಶ ಬರುವವರೆಗೂ ರಾಷ್ಟ್ರೀಯ ಹೆದ್ದಾರಿ 73ರ ಮಂಗಳೂರು- ತುಮಕೂರು ರಸ್ತೆಯ ಚಾರ್ಮಾಡಿ ಘಾಟಿ ಚಿಕ್ಕಮಗಳೂರು ಜಿಲ್ಲಾ ಗಡಿಯಿಂದ ಕೊಟ್ಟಿಗೆಹಾರವರೆಗೆ ಪ್ರತಿ ದಿನ ಸಂಜೆ 7ರಿಂದ ಬೆಳಿಗ್ಗೆ 7ರ ವರೆಗೆ ವಾಹನ ಸಂಚಾರ ನಿರ್ಬಂಧಿಸಿ ಆದೇಶಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next