Advertisement

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಇಲ್ಲ: ಶೆಟ್ಟರ್‌

10:48 PM Oct 05, 2019 | Lakshmi GovindaRaju |

ಧಾರವಾಡ: ಚಳಿಗಾಲದ ಅಧಿವೇಶನವನ್ನು ಬೆಳಗಾವಿ ಬದಲಾಗಿ ಬೆಂಗಳೂರಿನಲ್ಲೇ ನಡೆಸಲಾಗುವುದು ಎಂದು ಸಚಿವ ಜಗದೀಶ ಶೆಟ್ಟರ್‌ ಪುನರುಚ್ಚರಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾದ ನೆರೆ ಹಾವಳಿಯ ಪರಿಹಾರ ಕಾರ್ಯ ಸಾಗಿದ್ದು, ಜಿಲ್ಲಾಡಳಿತಗಳು ಸಂಪೂರ್ಣ ಈ ಕಾರ್ಯದಲ್ಲಿ ತೊಡಗಿವೆ. ಬೆಳಗಾವಿ ಜಿಲ್ಲಾಡಳಿತ ಜಿಲ್ಲೆಯಲ್ಲಿ ನೆರೆ ಪರಿಹಾರ ಕಾರ್ಯದಲ್ಲಿ ಮಗ್ನವಾಗಿರುವ ಕಾರಣ ಈ ಸಲ ಚಳಿಗಾಲದ ಅಧಿವೇಶವನ್ನು ಬೆಳಗಾವಿಯಲ್ಲಿ ನಡೆಸಲಾಗದು ಎಂದರು.

Advertisement

ಉಕ ಭಾಗದ ಸಮಸ್ಯೆ ಬಗೆಹರಿಸಲು ಬೆಳಗಾವಿಯಲ್ಲೇ ಅಧಿವೇಶನ ನಡೆಸಬೇಕೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಶೆಟ್ಟರ, ಸಿದ್ದರಾಮಯ್ಯ ಅವರು ತಾವು ಸಿಎಂ ಆಗಿದ್ದ ಐದು ವರ್ಷಗಳ ಅವಧಿಯಲ್ಲಿ ಎಷ್ಟು ಬಾರಿ ಬೆಳಗಾವಿಯಲ್ಲಿ ಅ ಧಿವೇಶನ ಮಾಡಿದ್ದಾರೆಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಟಾಂಗ್‌ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next