Advertisement

ರಮೇಶ ಜಾರಕಿಹೊಳಿ ಈ ಬಾರಿ ಬಿಜೆಪಿ ಸೋಲಿಸಿದರೆ ಅಚ್ಚರಿಯಿಲ್ಲ: ಸಿದ್ದರಾಮಯ್ಯ

05:05 PM Dec 05, 2021 | Team Udayavani |

ಬೆಳಗಾವಿ: ಕಳೆದ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಯನ್ನು ಸೋಲಿಸಿದ್ದ ರಮೇಶ ಜಾರಕಿಹೊಳಿ ಈ ಬಾರಿ ಬಿಜೆಪಿ ಅಭ್ಯರ್ಥಿ ಯನ್ನು ಸೋಲಿಸಿದರೂ ಅಚ್ಚರಿಯಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Advertisement

ರಾಮದುರ್ಗ ತಾಲ್ಲೂಕಿನ ಕಲ್ಲೂರ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಚನ್ನರಾಜ ಹಟ್ಟಿಹೋಳಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ರಮೇಶ ಜಾರಕಿಹೊಳಿ ತಮ್ಮ ಸಹೋದರ ಲಖನ್ ಅವರನ್ನು ಗೆಲ್ಲಿಸಲು ಬಿಜೆಪಿ ಅಭ್ಯರ್ಥಿ ಯನ್ನು ಸೋಲಿಸಿದರೂ ಅಚ್ಚರಿ ಪಡಬೇಕಿಲ್ಲ ಎಂದರು.

ನಾನು ವಿವೇಕರಾವ್ ಪಾಟೀಲ ಅವರಿಗೆ ಟಿಕೆಟ್ ಕೊಡದೆ ಮೋಸ ಮಾಡಿದ್ದೇನೆ ಎಂದು ರಮೇಶ್ ಎಲ್ಲ ಕಡೆ ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಪಕ್ಷಕ್ಕೆ ಸೇರದೆ ಹೇಗೆ ಟಿಕೆಟ್ ಕೊಡುವುದು. ಕೇವಲ ವಸಂತರಾವ್ ಪಾಟೀಲ ಮಗ ಎಂದು ಟಿಕೆಟ್ ಕೊಡಲು ಸಾಧ್ಯವಿಲ್ಲವೆಂದು ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್ ಪಕ್ಷವು ಮೂವರು ಕುರುಬ ಸಮುದಾಯದವರಿಗೆ ಟಿಕೆಟ್ ನೀಡಿದೆ. ಬಿಜೆಪಿ ಎಷ್ಟರ ಮಂದಿಗೆ ಟಿಕೆಟ್ ಕೊಟ್ಟಿದೆ ಎಂದು ಪ್ರಶ್ನಿಸಿದ ಅವರು ರಮೇಶ್ ಆಡಿದ್ದೇ ಆಟ ಎನ್ನುವ ಕಾಲ ಮುಗಿದುಹೋಗಿದೆ. ತತ್ವ ಮತ್ತು ಸಿದ್ದಾಂತದ ಮೇಲೆ ರಾಜಕೀಯ ಮಾಡಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next