Advertisement

ಪಕ್ಷ ಬಿಡುವವರ ಬಗ್ಗೆ ಚಿಂತೆಯಿಲ್ಲ, ಪಕ್ಷ ಕಟ್ಟುವ ಮನಸ್ಸುಗಳು ಇದ್ದರೆ ಸಾಕು! –ಎಚ್‌ಡಿಡಿ

10:04 AM Jan 12, 2020 | Team Udayavani |

ಬೆಂಗಳೂರು: ಪಕ್ಷ ಬಿಡುವವರ ಬಗ್ಗೆ ನನಗೆ ಚಿಂತೆಯಿಲ್ಲ. ಪಕ್ಷ ಕಟ್ಟುವ ಮನಸ್ಸುಗಳು ಇದ್ದರೆ ಸಾಕು ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹೇಳಿದ್ದಾರೆ.

Advertisement

ಪಕ್ಷದ ಕಚೇರಿಯಲ್ಲಿ ಮಹಿಳಾ ಘಟಕದ ಪದಾಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಪಕ್ಷ ಬಿಡುವವರು ಬಿಟ್ಟು ಹೋಗಲಿ. ಆದರೆ, ಇಲ್ಲೇ ಇದ್ದು ಸಮಸ್ಯೆ ಮಾಡುವುದು ಬೇಡ ಎಂದು ತಿಳಿಸಿದರು.

ರಾಜ್ಯದಲ್ಲಿ ಪಕ್ಷವನ್ನು ಪ್ರಬಲವಾಗಿ ಕಟ್ಟುವುದು ನನಗೆ ಗೊತ್ತಿದೆ. ಲೋಕಸಭೆ ಚುನಾವಣೆ, ಉಪ ಚುನಾವಣೆ ಸೋಲಿನ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ನಾನು ಸೋತಿದ್ದರೂ ಪಕ್ಷ ಕಟ್ಟುವ ಶಕ್ತಿ ಇದೆ. ಕೇರಳಕ್ಕೆ ಹೋಗಿ ಚಿಕಿತ್ಸೆ ಪಡೆದು ಬಂದಿದ್ದೇನೆ ಎಂದು ಹೇಳಿದರು.

ರಾಜ್ಯಸಭೆಗೆ ಹೋಗಲು ನನಗೆ ಮನಸ್ಸಿಲ್ಲ. ಅದಕ್ಕೂ ದೇವೇಗೌಡರಿಗೆ ಅಧಿಕಾರ ದಾಹ ಎಂಬ ಆರೋಪ ಬರುತ್ತದೆ. ಹೀಗಾಗಿ, ಇಲ್ಲೇ ಇದ್ದು ಹೋರಾಟ ಮುಂದುವರಿಸಲಿದ್ದೇನೆ ಎಂದು ತಿಳಿಸಿದರು.

ಮಂಗಳೂರು ಗಲಭೆ ಬಗ್ಗೆ ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಸಿಡಿ ಬಗ್ಗೆ ಬಿಜೆಪಿ ನಾಯಕರು ಮಾತನಾಡುತ್ತಿರುವುದು ನೋಡುತ್ತಿದ್ದೇನೆ. ಸೂಕ್ತ ಕಾಲದಲ್ಲಿ ಎಲ್ಲದಕ್ಕೂ ಉತ್ತರಿಸಲಿದ್ದೇನೆ ಎಂದು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next