Advertisement

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

11:20 PM Sep 19, 2024 | Team Udayavani |

ದೇವನಹಳ್ಳಿ(ಬೆಂಗಳೂರು ಗ್ರಾ.): ನಾಗಮಂಗಲ ಗಲಭೆ ವಿಚಾರವಾಗಿ ನಮ್ಮ ಮೇಲೆ ಎಫ್ಐಆರ್‌ ದಾಖಲು ಮಾಡಲಾಗಿದೆ. ಒಂದು ಎಫ್ಐಆರ್‌ ಅಲ್ಲ, 100 ಎಫ್ಐಆರ್‌ ದಾಖಲು ಮಾಡಿದರೂ ಹೆದರುವುದಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್‌ ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದರು.

Advertisement

ಸುದ್ದಿಗಾರರ ಜತೆ ಮಾತನಾಡಿ, ನಮ್ಮ ದೇಶ, ಹಿಂದೂಗಳ ರಕ್ಷಣೆ, ಹಿಂದೂಗಳ ಹಬ್ಬ, ಉತ್ಸವಗಳ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆ ಇಲ್ಲ. ನನ್ನ ಮೇಲೆ ಎಫ್ಐಆರ್‌ ಹಾಕಿದರೂ ನನ್ನ ಧ್ವನಿ ಅಡಗಿಸಲು ಸಾಧ್ಯವಿಲ್ಲ. ನಿಮ್ಮ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next