Advertisement

Z+ ಭದ್ರತೆಯನ್ನು ಹಿಂಪಡೆದುಕೊಳ್ಳಿ: ಬಿ.ಎಸ್‌.ಯಡಿಯೂರಪ್ಪ

11:16 PM Nov 02, 2023 | Team Udayavani |

ಬೆಂಗಳೂರು: ತನಗೆ ನೀಡಿರುವ ಝಡ್‌ ಪ್ಲಸ್‌ ಭದ್ರತೆಯನ್ನು ಹಿಂಪಡೆದುಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕೇಂದ್ರ ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ. ಕೆಲವು ದಿನಗಳ ಹಿಂದೆ ಯಡಿಯೂರಪ್ಪನವರಿಗೆ ಕೇಂದ್ರ ಸರಕಾರ ಝಡ್‌ ಪ್ಲಸ್‌ ಭದ್ರತೆ ನೀಡಿತ್ತು. ಜನರ ಮಧ್ಯೆ ಇರುವ ನನಗೆ ಇದರಿಂದ ಅಡಚಣೆಯಾಗುತ್ತಿದೆ. ಹೀಗಾಗಿ ಮೊದಲಿನ ಭದ್ರತಾ ವ್ಯವಸ್ಥೆಯೇ ಸಾಕು ಎಂದು ಮನವಿ ಮಾಡಿದ್ದಾರೆ. ಖುದ್ದು ಯಡಿಯೂರಪ್ಪನವರೇ ಸುದ್ದಿಗಾರರಿಗೆ ಗುರುವಾರ ಈ ವಿಷಯ ತಿಳಿಸಿದ್ದಾರೆ.

Advertisement

ರಾಜ್ಯದಲ್ಲಿ ವಿಪಕ್ಷ ನಾಯಕ ಸೇರಿ ಎಲ್ಲ ಆಯಕಟ್ಟಿನ ಸ್ಥಾನಗಳಿಗೆ ಶೀಘ್ರ ಸದಸ್ಯರ ನೇಮಕವಾಗಬೇಕೆಂದು ನಾನು ವರಿಷ್ಠರಿಗೆ ಮನವಿ ಮಾಡುತ್ತೇನೆ. ಬೆಳಗಾವಿ ಅಧಿವೇಶನಕ್ಕೆ ಮುಂಚಿತವಾಗಿಯೇ ಆಗಲಿದೆ ಎಂಬ ಭರವಸೆ ಇದೆ ಎಂದು ಹೇಳಿದರು. ಶಿವಮೊಗ್ಗದಲ್ಲಿ ನ.4ರಂದು ಬೇರೆ ಕಾರ್ಯಕ್ರಮ ನಿಗದಿಯಾಗಿದೆ. ನಾನು ಅಲ್ಲಿಗೆ ಹೋಗಬೇಕಿದೆ. ಹೀಗಾಗಿ ಅಲ್ಲಿಂದ ಬಂದ ಬಳಿಕ ಬರ ಅಧ್ಯಯನ ಪ್ರವಾಸ ಕೈಗೊಳ್ಳಲಾಗುತ್ತದೆ. ಈ ಭ್ರಷ್ಟ ಸರಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next