Advertisement

ಈಗ ಯಾರೂ ಸುಭದ್ರ ಸರ್ಕಾರ ಕೊಡಲು ಸಾಧ್ಯವಿಲ್ಲ; ಎಚ್.ಡಿ.ಕುಮಾರಸ್ವಾಮಿ

08:27 AM Jul 26, 2019 | Team Udayavani |

ಬೆಂಗಳೂರು: ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಯಾರೂ ಸುಭದ್ರ ಸರ್ಕಾರ ಕೊಡಲು ಸಾಧ್ಯವಿಲ್ಲ ಎಂದು ಹಂಗಾಮಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Advertisement

ಗುರುವಾರ ಕಾಂಗ್ರೆಸ್ ನ ಹಿರಿಯ ಶಾಸಕರ ರಾಮಲಿಂಗಾರೆಡ್ಡಿ ನಿವಾಸಕ್ಕೆ ಭೇಟಿ ನೀಡಿ ಸುಮಾರು ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡುತ್ತ ಈ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿಯಿಂದಲೂ ಸ್ಥಿರ ಸರ್ಕಾರ ಅಸಾಧ್ಯ ಎಂದು ಹೇಳಿದ ಕುಮಾರಸ್ವಾಮಿ, ಮುಂದಿನ ಬೆಳವಣಿಗೆ ಏನಾಗುತ್ತದೋ ನೋಡೋಣ ಎಂದು ಹೇಳಿದರು.

ರಾಮಲಿಂಗಾರೆಡ್ಡಿಯವರು ನಿಷ್ಠಾವಂತ ಕಾಂಗ್ರೆಸ್ಸಿಗರು, ನಾನು ಅವರ ಬಗ್ಗೆ ವಿಧಾನಸಭೆ ಕಲಾಪದಲ್ಲಿ ಮಾತನಾಡಬೇಕಿತ್ತು. ಆದರೆ ಕಲಾಪದಲ್ಲಿ ಮಾತನಾಡಲು ಆಗಿರಲಿಲ್ಲವಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ನಾನೇ ಖುದ್ದು ಭೇಟಿಯಾಗಿ ಅಭಿನಂದನೆ ಸಲ್ಲಿಸಲು ಬಂದಿದ್ದೇನೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next