Advertisement

Lok Sabha polls;ಕಾಂಗ್ರೆಸ್‌ಗೆ ಯಾರೂ ಅನಿವಾರ್ಯವಲ್ಲ: ವೀಣಾಗೆ ಶಿವಾನಂದ ಪಾಟೀಲ್‌ ಎಚ್ಚರಿಕೆ

11:42 PM Apr 07, 2024 | Team Udayavani |

ಬಾಗಲಕೋಟೆ: ಲೋಕಸಭೆ ಚುನಾವಣೆಗೆ ಬಾಗಲಕೋಟೆ ಕ್ಷೇತ್ರದಿಂದ ಟಿಕೆಟ್‌ ವಂಚಿತರಾಗಿ ಸದ್ಯ ಜಿಲ್ಲಾ ನಾಯಕರ ವಿರುದ್ಧ ಹರಿಹಾಯುತ್ತಿರುವ ವೀಣಾ ಕಾಶಪ್ಪನವರ್‌ ಅವರಿಗೆ ಜಿಲ್ಲೆಯ ಕಾಂಗ್ರೆಸ್‌ ನಾಯಕರು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

Advertisement

ನಗರದಲ್ಲಿ ರವಿವಾರ ಜರಗಿದ ಬಾಗಲಕೋಟೆ ವಿಧಾನಸಭೆ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶದಲ್ಲಿ ಸಚಿವ ಶಿವಾನಂದ ಪಾಟೀಲ್‌, ಬೀಳಗಿ ಶಾಸಕ-ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಜೆ.ಟಿ. ಪಾಟೀಲ್‌, ಟಿಕೆಟ್‌ ಆಕಾಂಕ್ಷಿಯಾಗಿದ್ದ ಅಜಯಕುಮಾರ್‌ ಸರನಾಯಕ ಅವರು ವೀಣಾಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಕಳೆದ ಬಾರಿ ವೀಣಾ ಪಡೆದಿದ್ದ ಮತಗಳಿಂತ ನಾವು 2 ಲಕ್ಷ ಮತ ಹೆಚ್ಚು ಪಡೆಯುತ್ತೇವೆ. ವೀಣಾ ಅವರ ಹುನಗುಂದ ಕ್ಷೇತ್ರದಲ್ಲಿ ಇನ್ನೂ ಹೆಚ್ಚು ಮತ ಪಡೆಯ ಲಿದ್ದೇವೆ ಎಂದು ಶಿವಾನಂದ ಪಾಟೀಲ್‌ ಹೇಳಿದರು.

ಜಿಲ್ಲೆಯ ಶಾಸಕರು ಬೆನ್ನಿಗೆ ಚೂರಿ ಹಾಕಿದರು ಎಂದು ವೀಣಾ ಹೇಳುತ್ತಿದ್ದಾರೆ. ಇದನ್ನು ಸಾಬೀತುಪಡಿಸಬೇಕು. ವೃಥಾರೋಪ ಮುಂದುವರಿಸಿದರೆ ಕೆಪಿಸಿಸಿ ಮತ್ತು ಎಐಸಿಸಿಗೆ ದೂರು ಕೊಡಬೇಕಾದೀತು ಎಂದು ಬೀಳಗಿ ಶಾಸಕ ಜೆ.ಟಿ. ಪಾಟೀಲ್‌ ಹೇಳಿದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next