Advertisement

ಬಿಎಸ್‌ವೈ ವಿರುದ್ಧ ಯಾರೂ ಷಡ್ಯಂತ್ರ ಮಾಡಿಲ್ಲ: ಅಂಗಡಿ

11:08 PM Oct 09, 2019 | Lakshmi GovindaRaju |

ಬೆಳಗಾವಿ: ಪ್ರಹ್ಲಾದ ಜೋಶಿ, ಡಿ.ವಿ.ಸದಾನಂದಗೌಡ ಸೇರಿದಂತೆ ಕೇಂದ್ರದಲ್ಲಿರುವ ರಾಜ್ಯದ ಯಾವ ಸಚಿವರೂ ಯಡಿಯೂರಪ್ಪ ವಿರುದ್ಧ ಷಡ್ಯಂತ್ರ ಮಾಡಿಲ್ಲ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಸ್ಪಷ್ಟಪಡಿಸಿದರು. ಬುಧವಾರ ಸುದ್ದಿಗಾರರ ಜತೆ ಮಾತನಾಡಿ, ಸಿಎಂ ವಿರುದ್ಧ ಯಾರು ಕುತಂತ್ರ ಮಾಡುತ್ತಿದ್ದಾರೋ ಗೊತ್ತಿಲ್ಲ. ಯತ್ನಾಳ ಅವರನ್ನೇ ಕೇಳಿದರೆ ಅದಕ್ಕೆ ಉತ್ತರ ಸಿಗುತ್ತದೆ.

Advertisement

ಬಿಜೆಪಿ ಶಿಸ್ತಿನ ಪಕ್ಷ. ನಮ್ಮಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ. ಎಲ್ಲ ಊಹಾಪೋಹಗಳು ಮಾಧ್ಯಮಗಳ ಸೃಷ್ಟಿ. ರಾಜ್ಯದಲ್ಲಿ ಯಡಿಯೂರಪ್ಪ ಅವರಷ್ಟು ಪ್ರಬಲ ನಾಯಕರು ಬೇರೆ ಯಾರೂ ಇಲ್ಲ. ಅವರೇ ನಮ್ಮ ನಾಯಕರು. ಯತ್ನಾಳ ಹಿರಿಯ ನಾಯಕರು. ವಾಜಪೇಯಿ ಅವರ ಸರ್ಕಾರದಲ್ಲಿ ಮಂತ್ರಿಗಳಾಗಿ ಕೆಲಸ ಮಾಡಿದವರು. ಯಾವ ಕಾರಣದಿಂದ ಈ ರೀತಿ ಹೇಳಿಕೆ ನೀಡಿದ್ದಾರೊ ಗೊತ್ತಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next