ಕಾರುಬಾರು ಆಗಿದ್ದು ಎರಡೂ ಪಕ್ಷಗಳು ಇದರ ಬಗ್ಗೆಯೇ ಹೆಚ್ಚು ವಾಕ್ಸಮರಕ್ಕಿಳಿದಿವೆ.
Advertisement
ಗುರುವಾರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳ್ಕರ್ ಅವರು ಗುಂಡ್ಲುಪೇಟೆಯ ಮನೆಯೊಂದರಲ್ಲಿ ಹಣ ಹಂಚಿಕೆ ಮಾಡಿದ್ದಾರೆನ್ನಲಾದ ವಿಡಿಯೋ ಇದೀಗ ವೈರಲ್ ಆಗಿ ಸುದ್ದಿಯಾಗಿದೆ. ಈ ಬಗ್ಗೆ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧಹರಿಹಾಯ್ದಿದ್ದರೆ, ಕಾಂಗ್ರೆಸ್ನವರು ನಾವು ಹಣ ಹಂಚಿಕೆ ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
ಮಾಡಿರುವುದು, ಬಿಜೆಪಿಯವರು ಹಣ ಹಂಚಿದ್ದಾರೆ ಎಂದು ಕಾಂಗ್ರೆಸ್ನವರು ಆರೋಪಿಸಿರುವುದು ಇದೀಗ ವಿವಾದವೂ ಆಗಿದೆ. ಈ ಮಧ್ಯೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೈಸೂರು ನಿವಾಸಕ್ಕೆ ಆಗಮಿಸಿದ್ದ ಗುಂಪೊಂದು ಪ್ರಚಾರಕ್ಕಾಗಿ ಹಣ ಕೊಡಿ ಎಂದು ಮನವಿ ಮಾಡಿದ ವಿಡಿಯೋ ದೃಶ್ಯಗಳು ಮಾಧ್ಯಮಗಳಲ್ಲಿ ಪ್ರಸಾರವಾಗಿ ಮುಜುಗರ ಸೃಷ್ಟಿಸಿದೆ. ಆಡಳಿತಾರೂಢ ಕಾಂಗ್ರೆಸ್ ಇಡೀ ಸಚಿವ ಸಂಪುಟದೊಂದಿಗೆ ಮುಖ್ಯಮಂತ್ರಿ ಸಹಿತ ಠಿಕಾಣಿ ಹೂಡಿದ್ದರೆ, ಬಿಜೆಪಿಯು ರಾಷ್ಟ್ರ ಮಟ್ಟದಿಂದ ಜಿಲ್ಲಾ ಮಟ್ಟದವರೆಗಿನ ಎಲ್ಲ ನಾಯಕರು ಎರಡೂ ಕ್ಷೇತ್ರಗಳಲ್ಲೇ ಬೀಡು ಬಿಟ್ಟಿದ್ದಾರೆ.
Related Articles
ಗುಂಡ್ಲುಪೇಟೆ: ಸಚಿವ ಯು.ಟಿ.ಖಾದರ್ ಅವರ ಕಾರು ಚಾಲಕ ವ್ಯಕ್ತಿಯೋರ್ವನಿಗೆ ಹಣ ಹಂಚಿದ ಪ್ರಕರಣ, ಕಾಂಗ್ರೆಸ್ ಜಿಪಂ ಸದಸ್ಯ ಚನ್ನಪ್ಪ ಬಳಿ 1.26 ಲಕ್ಷ ರೂ.ಹಣ ಪತ್ತೆಯಾದ ನಂತರ, ಇದೀಗ ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳ್ಕರ್ ಅವರೇ ಸ್ವತಃ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರಿಗೆ ಹಣ ಹಂಚಿಕೆ ಮಾಡುತ್ತಿರುವ ದೃಶ್ಯಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ.
Advertisement
ಕೆಪಿಸಿಸಿ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳ್ಕರ್ ಅವರು ತಾಲೂಕಿನ ಅಣ್ಣೂರುಕೇರಿಯಲ್ಲಿ ಹಣ ಹಂಚುತ್ತಿರುವ ವಿಡಿಯೋಮಾಧ್ಯಮಗಳಿಗೆ ಲಭ್ಯವಾಗಿದೆ. ಮಹಿಳಾ ಕಾರ್ಯಕರ್ತೆಯರೊಂದಿಗೆ ಮಾತನಾಡುತ್ತ, ಪಕ್ಕದಲ್ಲಿ ಕುಳಿತ ಇನ್ನೊಬ್ಬ ಮಹಿಳೆಯ ಬಳಿ ಹೆಸರುಗಳನ್ನು ಬರೆಸಿಕೊಂಡ ಹೆಬ್ಟಾಳ್ಕರ್ 2000 ರೂ. ನೋಟಿನ ಕಂತೆಯನ್ನು ಮಹಿಳಾ ಕಾರ್ಯಕರ್ತರಿಗೆ ನೀಡುತ್ತಿರುವ ದೃಶ್ಯ ಲಭ್ಯವಾಗಿದೆ. ಇನ್ನೊಂದು ಪ್ರಕರಣದಲ್ಲಿ ಕನಕಪುರ ಮೂಲದ ಮೂವರು ಮಹಿಳೆಯರು ಹಾಗೂ ಒಬ್ಬ ಪುರುಷ ಹಣ ಹಂಚಲು
ಹೋಗಿದ್ದಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿರುವ ಘಟನೆ ತಾಲೂಕಿನ ಹೊರೆಯಾಲ ಗ್ರಾಮದಲ್ಲಿ ನಡೆದಿದೆ.