Advertisement

ಎಪಿಎಂಸಿಗೆ ಮೂವರ ನಾಮನಿರ್ದೇಶನ

09:24 AM Jun 30, 2020 | Suhan S |

ಬೀದರ: ಬೀದರ ಎಪಿಎಂಸಿ ಸದಸ್ಯರನ್ನಾಗಿ ಸರ್ಕಾರ ಮೂವರನ್ನು ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದೆ. ಎಪಿಎಂಸಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ಮುಂಚಿತವಾಗಿ ಇವರ ನೇಮಕ ಮಾಡಲಾಗಿದೆ.

Advertisement

ಬಿಜೆಪಿಯಲ್ಲಿ ಸಕ್ರಿಯವಾಗಿ ತೊಡಗಿರುವ ಅರವಿಂದ ಪಾಟೀಲ ಚಿಲ್ಲರ್ಗಿ, ಧನರಾಜ ಪೋಶೆಟ್ಟಿ ಬಗದಲ್‌ ಹಾಗೂ ನೀಲಾಂಬಿಕಾ ಬಸವರಾಜ ಆಣದೂರು ಅವರನ್ನು ನೇಮಿಸಿ ಸಹಕಾರ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಬಿ.ಎಸ್‌.ಮಂಜುನಾಥ ಆದೇಶ ಹೊರಡಿಸಿದ್ದಾರೆ. ಮುಂದಿನ ಆದೇಶದವರೆಗೆ ಈ ನೇಮಕ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಎಪಿಎಂಸಿ ಆಡಳಿತದ ಚುಕ್ಕಾಣಿ ಮತ್ತೆ ತನ್ನ ಕೈಯಲ್ಲಿ ಹಿಡಿದಿಟ್ಟುಕೊಳ್ಳಲು ಆಡಳಿತಾರೂಢ ಬಿಜೆಪಿ ಮುಖಂಡರು ಪ್ರಯತ್ನ ನಡೆಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಡಾ| ಶೈಲೇಂದ್ರ ಬೆಲ್ದಾಳೆ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ಸಹಕಾರ ಸಚಿವರನ್ನು ಭೇಟಿಯಾಗಿ ಮೂವರ ನಾಮ ನಿರ್ದೇಶನಕ್ಕೆ ಮನವಿ ಮಾಡಿದ್ದು, ಇದಕ್ಕೆ ಸಚಿವರು ಸ್ಪಂದಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next