Advertisement

ವಿಧಾನ ಪರಿಷತ್ತಿಗೆ ನಾಮ ನಿರ್ದೇಶನ

06:00 AM Oct 31, 2018 | |

ಬೆಂಗಳೂರು: ರಾಜ್ಯ ವಿಧಾನ ಪರಿಷತ್‌ಗೆ ಸಮಾಜ ಸೇವೆ ಹಾಗೂ ಕ್ರೀಡಾ ಸಾಧನೆಯಡಿ ಕಾಂಗ್ರೆಸ್‌ನ ಯು.ಬಿ.ವೆಂಕಟೇಶ್‌ ಹಾಗೂ ಪ್ರಕಾಶ್‌ ರಾಠೊಡ್‌ ಅವರನ್ನು ನಾಮ ನಿರ್ದೇಶನ ಮಾಡಿ ರಾಜ್ಯಪಾಲ ವಜುಭಾಯಿವಾಲಾ ಆದೇಶ ಹೊರಡಿಸಿದ್ದಾರೆ.

Advertisement

ವಿಧಾನ ಪರಿಷತ್‌ಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮೂವರನ್ನು ನಾಮ ನಿರ್ದೇಶನ ಮಾಡಲು ಅವಕಾಶವಿತ್ತು. ಸಮ್ಮಿಶ್ರ ಸರ್ಕಾರ ಆದ್ದರಿಂದ ಕಾಂಗ್ರೆಸ್‌ ನಿಂದ ಇಬ್ಬರು ಹಾಗೂ ಜೆಡಿಎಸ್‌ನಿಂದ ಒಬ್ಬರನ್ನು ಆಯ್ಕೆ ಮಾಡಲು ಒಪ್ಪಂದವಾಗಿತ್ತು. ಇದೀಗ ಕಾಂಗ್ರೆಸ್‌ ಕೋಟಾ ಮುಗಿದಿದ್ದು ಜೆಡಿಎಸ್‌ನಿಂದ ಒಬ್ಬರನ್ನು ನಾಮ ನಿರ್ದೇಶನಕ್ಕೆ ಸರ್ಕಾರ ಶಿಫಾರಸು ಮಾಡಬೇಕಿದೆ. ಈ ಮಧ್ಯೆ, ಆಂಗ್ಲೋ ಇಂಡಿಯನ್‌ ಕೋಟಾದಡಿ ರಾಜ್ಯ ಸರ್ಕಾರ ಮಾಜಿ ಶಾಸಕಿ ವಿನೀಶಾ ನೀರೋ ಅವರನ್ನು ವಿಧಾನಸಭೆಗೆ ಮರು ನಾಮಕರಣ ಮಾಡಲು ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದು ಅದಕ್ಕೂ ಅಂಗೀಕಾರ ದೊರೆತಿದೆ.

Advertisement

Udayavani is now on Telegram. Click here to join our channel and stay updated with the latest news.

Next